ಬ್ರೇಕಿಂಗ್ ನ್ಯೂಸ್
25-05-25 08:48 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಮತ್ತು ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದಲ್ಲಿ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಬಿಜೆಪಿ ಶಾಸಕರು ಮತ್ತು ಇತರ ಹಿರಿಯ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು.
ಇಂದು ಸಭೆಯ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಅಮಾನತು ಆದೇಶ ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮ ಕೈಗೊಂಡಿದ್ದೆವು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಸಂಧಾನ ಸಭೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಭಾಗಿಯಾಗಿದ್ದರು. ಸ್ಪೀಕರ್ ಖಾದರ್ ಇಂದು ರಾತ್ರಿಯೇ ಹಜ್ ಯಾತ್ರೆ ಕೈಗೊಳ್ಳಲಿದ್ದು ಅದಕ್ಕೂ ಮೊದಲೇ ಬಿಜೆಪಿಗೆ ಸಿಹಿಸುದ್ದಿ ನೀಡಿದಂತಾಗಿದೆ.
The state government has withdrawn suspension orders of 18 BJP MLAs on Sunday, May 25. This decision was taken in a mediation meeting held under the chairmanship of Assembly Speaker U.T. Khader.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am