ಬ್ರೇಕಿಂಗ್ ನ್ಯೂಸ್
25-05-25 08:48 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಮತ್ತು ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದಲ್ಲಿ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಬಿಜೆಪಿ ಶಾಸಕರು ಮತ್ತು ಇತರ ಹಿರಿಯ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು.
ಇಂದು ಸಭೆಯ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಅಮಾನತು ಆದೇಶ ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮ ಕೈಗೊಂಡಿದ್ದೆವು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಸಂಧಾನ ಸಭೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಭಾಗಿಯಾಗಿದ್ದರು. ಸ್ಪೀಕರ್ ಖಾದರ್ ಇಂದು ರಾತ್ರಿಯೇ ಹಜ್ ಯಾತ್ರೆ ಕೈಗೊಳ್ಳಲಿದ್ದು ಅದಕ್ಕೂ ಮೊದಲೇ ಬಿಜೆಪಿಗೆ ಸಿಹಿಸುದ್ದಿ ನೀಡಿದಂತಾಗಿದೆ.
The state government has withdrawn suspension orders of 18 BJP MLAs on Sunday, May 25. This decision was taken in a mediation meeting held under the chairmanship of Assembly Speaker U.T. Khader.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm