ಬ್ರೇಕಿಂಗ್ ನ್ಯೂಸ್
26-05-25 12:42 pm HK News Desk ಕರ್ನಾಟಕ
ಸಕಲೇಶಪುರ, ಮೇ 26 : ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಈ ಬಾರಿಯೂ ಭೂಕುಸಿತವಾಗಿದ್ದು ವಾಹನ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ. ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಮತ್ತು ದೊಡ್ಡತಪ್ಪಲು ಎಂಬಲ್ಲಿ ರಸ್ತೆ ಕುಸಿದಿದ್ದು ಒಂದು ಬದಿಯಲ್ಲಿ ಏಕಮುಖದ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ 90 ಡಿಗ್ರಿ ಮಾದರಿಯಲ್ಲಿ ನೂರು ಅಡಿಗಳಷ್ಟು ಗುಡ್ಡವನ್ನು ಅಗೆದಿದ್ದು ಅದೇ ಜಾಗದಲ್ಲಿ ಈಗ ರಸ್ತೆ ಕುಸಿತವಾಗಿದೆ. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಗೆದು ಬಿಟ್ಟಿರುವ ಗುಡ್ಡಗಳಲ್ಲಿ ಮಣ್ಣು ಕುಸಿಯುತ್ತಿದೆ. ಕೆಲವೊಂದು ಕಡೆ ತಡೆಗೋಡೆ ನಿರ್ಮಿಸಿದ್ದರು ಅದರ ಮೇಲಿನಿಂದಲೇ ರಸ್ತೆಗೆ ಮಣ್ಣು ಬಿದ್ದಿದೆ.




ಇದೇ ವೇಳೆ, ಈ ಭಾಗದ ಬೆಟ್ಟಗಳಿಂದ ಮಣ್ಣಿನ ಸಮೇತ ಮರಗಳು ಕೂಡ ನೆಲಕ್ಕೆ ಉರುಳುತ್ತಿದ್ದು ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಾರಿ ಮಳೆಗಾಲ ಆರಂಭದಲ್ಲಿಯೇ ಭೂಕುಸಿತ ಉಂಟಾಗಿದ್ದು ಸಕಲೇಶಪುರ ದೊಡ್ಡತಪ್ಲೆ ಬಳಿ ರಸ್ತೆ ಕುಸಿದು ಕೊಚ್ಚಿ ಹೋಗ ತೊಡಗಿದೆ. ಇಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷವೂ ಇದೇ ಜಾಗದಲ್ಲಿ ಗುಡ್ಡ ಕುಸಿದು ಭಾರೀ ತೊಂದರೆಯಾಗಿತ್ತು. ಸ್ಥಳದಲ್ಲೇ ಜೆಸಿಬಿ, ಹಿಟ್ಯಾಚಿ ಯಂತ್ರಗಳನ್ನು ಇರಿಸಿದ್ದು ಮಳೆಯ ಮಧ್ಯೆ ವಾಹನ ಸಂಚಾರ ಸುಗಮಗೊಳಿಸಲು ಪೊಲೀಸರು ಹರದಾಹಸ ಮಾಡುತ್ತಿದ್ದಾರೆ. ಸದ್ಯಕ್ಕೆ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಕಲೇಶಪುರದ ಆನೆಮಹಲ್ ಬಳಿ ರಸ್ತೆ ಮೇಲೆ ಮಣ್ಣು ಕುಸಿದಿರುವುದನ್ನು ಶಾಸಕ ಸಿಮೆಂಟ್ ಮಂಜು ಸೋಮವಾರ ಬೆಳಗ್ಗೆ ನೋಡಲು ಬಂದಿದ್ದು ಅವರ ಕಣ್ಣೆದುರೇ ಗುಡ್ಡ ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಮಣ್ಣು ಕುಸಿದು ಬಿದ್ದಿದ್ದು ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಭೂ ಕುಸಿ
Heavy rainfall across the coastal and Malnad regions has once again caused a landslide along the Shiradi Ghat highway, which connects Mangaluru and Bengaluru. Commuters are facing severe inconvenience due to the disruption. The landslide has occurred in Sakleshpur taluk, particularly near Donigal and Doddathappalu areas, leading to partial road collapse. As a result, traffic is being allowed in only one direction, causing significant delays and congestion.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm