ಬ್ರೇಕಿಂಗ್ ನ್ಯೂಸ್
26-05-25 07:23 pm HK News Desk ಕರ್ನಾಟಕ
ಮಡಿಕೇರಿ, ಮೇ 26 : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಆರಂಭದಲ್ಲೇ ಮಳೆ ತೀವ್ರಗೊಂಡಿದ್ದು, ಮಳೆಯಿಂದಾಗಿ ಅನಾಹುತ ಉಂಟಾಗುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಮತ್ತು ರಸ್ತೆಗಳ ಕುಸಿತ ಆಗುವುದನ್ನು ತಪ್ಪಿಸಲು ಕೊಡಗು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಸರಕು ಸಾಗಾಟದ ಲಾರಿಗಳು, ಭಾರದ ಟ್ಯಾಂಕರ್ ಇನ್ನಿತರ ಘನ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಪ್ರತಿ ಬಾರಿಯೂ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದು, ರಸ್ತೆಗಳು ಕುಸಿತಗೊಂಡು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ ಸಾರ್ವಜನಿಕ ಆಸ್ತಿಯ ಸುರಕ್ಷತೆ ದೃಷ್ಟಿಯಿಂದ 18,500 ಕೇಜಿಗಿಂತ ಹೆಚ್ಚು ಭಾರವುಳ್ಳ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸೆಲ್ ಟ್ರಕ್ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೇನರ್ಸ್, ಲಾಂಗ್ ಚೇಸಿಸ್ ಆರ್ಟಿಕ್ಯುಲೇಟೆಡ್ ವಾಹನಗಳು, ಮರಳು ಸಾಗಾಟ- ಮರದ ದಿಮ್ಮಿ ಸಾಗಾಟದ ಎಲ್ಲ ರೀತಿಯ ವಾಹನಗಳನ್ನು ಕೊಡಗು ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ನಿಷೇಧಿಸಲಾಗಿದೆ.
ಸದ್ಯಕ್ಕೆ ಜೂನ್ 6ರಿಂದ ಜುಲೈ 5ರ ವರೆಗೆ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯ ಯಾವುದೇ ರಸ್ತೆಯಲ್ಲಿ ಸಂಚರಿಸುವುದಕ್ಕೆ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸೆಲ್ ಬಸ್ ಗಳು ಸೇರಿದಂತೆ) ಸಂಚಾರಕ್ಕೆ ವಿನಾಯ್ತಿ ನೀಡಲಾಗಿದೆ. ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗವಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ದಿನದ 24 ಗಂಟೆಯೂ ಸಿಬಂದಿ ನಿಯೋಜಿಸಿ ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಮತ್ತು ಪ್ರಾದೇಶಿಕ ಸಾರಿಗೆ ಆಯುಕ್ತರಿಗೂ ಸೂಚಿಸಿದ್ದಾರೆ.
Heavy Rains Prompt Ban on Goods Trucks and Tankers Across Kodagu, Exemption Given to Transport Buses.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm