ಬ್ರೇಕಿಂಗ್ ನ್ಯೂಸ್
26-05-25 07:23 pm HK News Desk ಕರ್ನಾಟಕ
ಮಡಿಕೇರಿ, ಮೇ 26 : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಆರಂಭದಲ್ಲೇ ಮಳೆ ತೀವ್ರಗೊಂಡಿದ್ದು, ಮಳೆಯಿಂದಾಗಿ ಅನಾಹುತ ಉಂಟಾಗುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಮತ್ತು ರಸ್ತೆಗಳ ಕುಸಿತ ಆಗುವುದನ್ನು ತಪ್ಪಿಸಲು ಕೊಡಗು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಸರಕು ಸಾಗಾಟದ ಲಾರಿಗಳು, ಭಾರದ ಟ್ಯಾಂಕರ್ ಇನ್ನಿತರ ಘನ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಪ್ರತಿ ಬಾರಿಯೂ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದು, ರಸ್ತೆಗಳು ಕುಸಿತಗೊಂಡು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ ಸಾರ್ವಜನಿಕ ಆಸ್ತಿಯ ಸುರಕ್ಷತೆ ದೃಷ್ಟಿಯಿಂದ 18,500 ಕೇಜಿಗಿಂತ ಹೆಚ್ಚು ಭಾರವುಳ್ಳ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸೆಲ್ ಟ್ರಕ್ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೇನರ್ಸ್, ಲಾಂಗ್ ಚೇಸಿಸ್ ಆರ್ಟಿಕ್ಯುಲೇಟೆಡ್ ವಾಹನಗಳು, ಮರಳು ಸಾಗಾಟ- ಮರದ ದಿಮ್ಮಿ ಸಾಗಾಟದ ಎಲ್ಲ ರೀತಿಯ ವಾಹನಗಳನ್ನು ಕೊಡಗು ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ನಿಷೇಧಿಸಲಾಗಿದೆ.
ಸದ್ಯಕ್ಕೆ ಜೂನ್ 6ರಿಂದ ಜುಲೈ 5ರ ವರೆಗೆ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯ ಯಾವುದೇ ರಸ್ತೆಯಲ್ಲಿ ಸಂಚರಿಸುವುದಕ್ಕೆ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸೆಲ್ ಬಸ್ ಗಳು ಸೇರಿದಂತೆ) ಸಂಚಾರಕ್ಕೆ ವಿನಾಯ್ತಿ ನೀಡಲಾಗಿದೆ. ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗವಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ದಿನದ 24 ಗಂಟೆಯೂ ಸಿಬಂದಿ ನಿಯೋಜಿಸಿ ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಮತ್ತು ಪ್ರಾದೇಶಿಕ ಸಾರಿಗೆ ಆಯುಕ್ತರಿಗೂ ಸೂಚಿಸಿದ್ದಾರೆ.
Heavy Rains Prompt Ban on Goods Trucks and Tankers Across Kodagu, Exemption Given to Transport Buses.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am