ಬ್ರೇಕಿಂಗ್ ನ್ಯೂಸ್
28-05-25 07:06 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 28 : ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ಅವರನ್ನು ಪ್ರಭಾರ ನೆಲೆಯಲ್ಲಿ ನೇಮಿಸಿದ್ದನ್ನು ಪ್ರಶ್ನಿಸಿ ವಕೀಲರ ನಿಯೋಗವೊಂದು ರಾಜ್ಯ ಸರಕಾರಕ್ಕೆ ಪತ್ರ ಬರೆದಿದೆ. ಸಲೀಂ ಅವರನ್ನು ನೇಮಕ ಮಾಡುವ ಸಂದರ್ಭದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿಲ್ಲ ಎಂದು ಆಕ್ಷೇಪಿಸಿದ್ದು, ಏಳು ದಿನಗಳ ಒಳಗೆ ಸ್ಪಂದನೆ ನೀಡದಿದ್ದರೆ ಹೈಕೋರ್ಟಿನಲ್ಲಿ ರಿಟ್ ಪಿಟಿಶನ್ ಹಾಕುವುದಾಗಿ ಎಚ್ಚರಿಸಿದೆ.
ಹಿರಿಯ ವಕೀಲರಾದ ಉಮಾಪತಿ ಎಸ್., ಸುಧಾ ಕಥುವಾ, ಅಖಿಲ್ ಬಾಬು ಅವರನ್ನೊಳಗೊಂಡ ನಿಯೋಗವು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆಡಳಿತ ಮತ್ತು ಸುಧಾರಣೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ನೀಡಿದ್ದು, ಕೇಂದ್ರ ಆಡಳಿತ ಸೇವಾ ಆಯೋಗಕ್ಕೂ ಪತ್ರ ಬರೆದಿದೆ. ಡಿಜಿ ಮತ್ತು ಐಜಿಯನ್ನು ನೇಮಕ ಮಾಡುವ ಸಂದರ್ಭದಲ್ಲಿ ಪ್ರಭಾರ ನೆಲೆಯಲ್ಲಿ ನೇಮಕ ಮಾಡುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಆದೇಶವನ್ನು ಇಲ್ಲಿ ಉಲ್ಲಂಘನೆ ಮಾಡಲಾಗಿದೆ. ಪ್ರಕಾಶ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ಪಷ್ಟ ಆದೇಶ ನೀಡಿದೆ ಎಂದು ಪತ್ರದಲ್ಲಿ ಗಮನ ಸೆಳೆದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಪ್ರಕಾರ, ಡಿಜಿಪಿ ದರ್ಜೆಯ ಅಧಿಕಾರಿಯನ್ನು ನೇಮಿಸುವ ಸಂದರ್ಭದಲ್ಲಿ ಇನ್ ಚಾರ್ಜ್ ಅಥವಾ ಏಕ್ಟಿಂಗ್ ಹೆಸರಲ್ಲಿ ನೇಮಕ ಮಾಡುವಂತಿಲ್ಲ. ಅತ್ಯಂತ ಅನಿವಾರ್ಯ ಅಥವಾ ಅಪರೂಪದ ಸನ್ನಿವೇಶ ಹೊರತುಪಡಿಸಿ ಈ ರೀತಿ ನೇಮಕ ಮಾಡಲಾಗದು. ಬದಲಾಗಿ, ಯುಪಿಎಸ್ಸಿ ಪೇನಲ್ ಕಮಿಟಿಯ ಶಿಫಾರಸು ಪರಿಗಣಿಸಿ ಸೀನಿಯಾರಿಟಿ ಆಧಾರದಲ್ಲಿ ಪೂರ್ಣಕಾಲಿಕವಾಗಿಯೇ ಈ ನೇಮಕಾತಿ ಆಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾಗಿ ವಕೀಲ ಉಮಾಪತಿ ಹೇಳಿದ್ದಾರೆ. ಕರ್ನಾಟಕ ಸರಕಾರವು ಈ ನೇಮಕಾತಿ ಸಂದರ್ಭದಲ್ಲಿ ಯುಪಿಎಸ್ಸಿಗೆ ತಜ್ಞರ ಕಮಿಟಿಯ ವರದಿಯನ್ನೂ ಪಡೆದಿರಲಿಲ್ಲ. ಅಲ್ಲದೆ, ಎರಡು ವರ್ಷ ಡಿಜಿಯಾಗಿ ಸೇವೆ ಸಲ್ಲಿಸಿರಬೇಕೆಂಬ ನಿಯಮ ಅನ್ವಯಿಸಿಲ್ಲ ಇತ್ಯಾದಿ ಅಂಶಗಳನ್ನು ಉಲ್ಲೇಖಿಸಿದ್ದು ಕಾನೂನು ಪಾಲನೆಯಾಗಿಲ್ಲ ಎಂದಿದ್ದಾರೆ.
ಹೀಗಾಗಿ ಕೂಡಲೇ ಪ್ರಭಾರ ನೆಲೆಯಲ್ಲಿ ನೇಮಕ ಮಾಡಿರುವುದನ್ನು ಹಿಂಪಡೆಯಬೇಕು ಮತ್ತು ಸುಪ್ರೀಂ ಕೋರ್ಟ್ ಗೈಡ್ ಲೈನ್ಸ್ ಪ್ರಕಾರ ರೆಗ್ಯುಲರ್ ನೇಮಕಾತಿ ಪ್ರಕ್ರಿಯೆ ಅನುಸರಿಸಬೇಕು ಎಂದು ಪತ್ರದಲ್ಲಿ ಆಗ್ರಹ ಮಾಡಿದ್ದಾರೆ. ರಾಜ್ಯ ಸರಕಾರದ ಅಧಿಕಾರಿಗಳು ಈ ಬಗ್ಗೆ ಏಳು ದಿನಗಳ ಒಳಗಡೆ ಸ್ಪಷ್ಟನೆ ನೀಡದಿದ್ದರೆ ಕಾನೂನು ರೀತ್ಯ ಮುಂದುವರಿಯುವುದಾಗಿ ವಕೀಲರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರಕಾರವು ಮೇ 21ರಿಂದ ಅನ್ವಯ ಆಗುವಂತೆ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರನ್ನು ಡಿಜಿ ಮತ್ತು ಐಜಿಯಾಗಿ ಪ್ರಭಾರ ನೆಲೆಯಲ್ಲಿ ನೇಮಕ ಮಾಡಿತ್ತು. ಇದಕ್ಕೂ ಮುನ್ನ ಸಲೀಂ ಅವರು ಸಿಐಡಿ ಮತ್ತು ಆರ್ಥಿಕ ಅಪರಾಧಗಳ ವಿಭಾಗದ ಡಿಐಜಿ ಆಗಿದ್ದರು. ಡಿಜಿ ಆಗಿದ್ದ ಅಲೋಕ್ ಮೋಹನ್ ಮೇ 21ರಂದು ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಲೀಂ ನೇಮಕವಾಗಿದ್ದು, ಎರಡು ತಿಂಗಳ ಬಳಿಕ ಪೂರ್ಣಾವಧಿಗೆ ಡಿಜಿಯಾಗುವ ನಿರೀಕ್ಷೆಯಿದೆ.
A submission has been made to the government of Karnataka by a delegation of lawyers objecting to the appointment of M.A. Saleem as the in-charge state police chief.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm