ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am