ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm