ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm