ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm