ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm