ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm