ಬ್ರೇಕಿಂಗ್ ನ್ಯೂಸ್
29-05-25 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿಎಂ ಕೆಲ ಹೊತ್ತು ಮಾತುಕತೆ ನಡೆಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ. ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
ಮಂಗಳೂರಿಗೆ ಬಿಕೆ ಹರಿಪ್ರಸಾದ್;
ಬಿಕೆ ಹರಿಪ್ರಸಾದ್ ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ ಎಂದರು.
ಮಂಗಳೂರಲ್ಲಿ ಸಾಲು ಸಾಲು ಹತ್ಯೆಗಳ ಬಗ್ಗೆ ಮಾತನಾಡಿ, ಯಾರೇ ಎಷ್ಟೇ ಪ್ರಭಾವಿ ಇದ್ದರೂ ಕೂಡ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಕಾನೂನಿನಿಂತ ದೊಡ್ಡ ವರು ಅಲ್ಲ, ಕಾನೂನೇ ಎಲ್ಲರಿಗಿಂತ ದೊಡ್ಡದು. ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ. ಮೇ 30 ರವರೆಗೆ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ.
CM Holds Breakfast Meeting with Congress MLC B K Hariprasad, Plans Visit to Mangalore Amid Communal Tensions.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am