ಬ್ರೇಕಿಂಗ್ ನ್ಯೂಸ್
29-05-25 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿಎಂ ಕೆಲ ಹೊತ್ತು ಮಾತುಕತೆ ನಡೆಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ. ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
ಮಂಗಳೂರಿಗೆ ಬಿಕೆ ಹರಿಪ್ರಸಾದ್;
ಬಿಕೆ ಹರಿಪ್ರಸಾದ್ ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ ಎಂದರು.
ಮಂಗಳೂರಲ್ಲಿ ಸಾಲು ಸಾಲು ಹತ್ಯೆಗಳ ಬಗ್ಗೆ ಮಾತನಾಡಿ, ಯಾರೇ ಎಷ್ಟೇ ಪ್ರಭಾವಿ ಇದ್ದರೂ ಕೂಡ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಕಾನೂನಿನಿಂತ ದೊಡ್ಡ ವರು ಅಲ್ಲ, ಕಾನೂನೇ ಎಲ್ಲರಿಗಿಂತ ದೊಡ್ಡದು. ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ. ಮೇ 30 ರವರೆಗೆ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ.
CM Holds Breakfast Meeting with Congress MLC B K Hariprasad, Plans Visit to Mangalore Amid Communal Tensions.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am