ಬ್ರೇಕಿಂಗ್ ನ್ಯೂಸ್
29-05-25 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿಎಂ ಕೆಲ ಹೊತ್ತು ಮಾತುಕತೆ ನಡೆಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ. ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
ಮಂಗಳೂರಿಗೆ ಬಿಕೆ ಹರಿಪ್ರಸಾದ್;
ಬಿಕೆ ಹರಿಪ್ರಸಾದ್ ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ ಎಂದರು.
ಮಂಗಳೂರಲ್ಲಿ ಸಾಲು ಸಾಲು ಹತ್ಯೆಗಳ ಬಗ್ಗೆ ಮಾತನಾಡಿ, ಯಾರೇ ಎಷ್ಟೇ ಪ್ರಭಾವಿ ಇದ್ದರೂ ಕೂಡ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಕಾನೂನಿನಿಂತ ದೊಡ್ಡ ವರು ಅಲ್ಲ, ಕಾನೂನೇ ಎಲ್ಲರಿಗಿಂತ ದೊಡ್ಡದು. ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ. ಮೇ 30 ರವರೆಗೆ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ.
CM Holds Breakfast Meeting with Congress MLC B K Hariprasad, Plans Visit to Mangalore Amid Communal Tensions.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm