ಬ್ರೇಕಿಂಗ್ ನ್ಯೂಸ್
29-05-25 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿಎಂ ಕೆಲ ಹೊತ್ತು ಮಾತುಕತೆ ನಡೆಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ. ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
ಮಂಗಳೂರಿಗೆ ಬಿಕೆ ಹರಿಪ್ರಸಾದ್;
ಬಿಕೆ ಹರಿಪ್ರಸಾದ್ ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ ಎಂದರು.
ಮಂಗಳೂರಲ್ಲಿ ಸಾಲು ಸಾಲು ಹತ್ಯೆಗಳ ಬಗ್ಗೆ ಮಾತನಾಡಿ, ಯಾರೇ ಎಷ್ಟೇ ಪ್ರಭಾವಿ ಇದ್ದರೂ ಕೂಡ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಕಾನೂನಿನಿಂತ ದೊಡ್ಡ ವರು ಅಲ್ಲ, ಕಾನೂನೇ ಎಲ್ಲರಿಗಿಂತ ದೊಡ್ಡದು. ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ. ಮೇ 30 ರವರೆಗೆ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ.
CM Holds Breakfast Meeting with Congress MLC B K Hariprasad, Plans Visit to Mangalore Amid Communal Tensions.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm