ಬ್ರೇಕಿಂಗ್ ನ್ಯೂಸ್
29-05-25 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿಎಂ ಕೆಲ ಹೊತ್ತು ಮಾತುಕತೆ ನಡೆಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ. ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
ಮಂಗಳೂರಿಗೆ ಬಿಕೆ ಹರಿಪ್ರಸಾದ್;
ಬಿಕೆ ಹರಿಪ್ರಸಾದ್ ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ ಎಂದರು.
ಮಂಗಳೂರಲ್ಲಿ ಸಾಲು ಸಾಲು ಹತ್ಯೆಗಳ ಬಗ್ಗೆ ಮಾತನಾಡಿ, ಯಾರೇ ಎಷ್ಟೇ ಪ್ರಭಾವಿ ಇದ್ದರೂ ಕೂಡ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಕಾನೂನಿನಿಂತ ದೊಡ್ಡ ವರು ಅಲ್ಲ, ಕಾನೂನೇ ಎಲ್ಲರಿಗಿಂತ ದೊಡ್ಡದು. ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ. ಮೇ 30 ರವರೆಗೆ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ.
CM Holds Breakfast Meeting with Congress MLC B K Hariprasad, Plans Visit to Mangalore Amid Communal Tensions.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am