ಬ್ರೇಕಿಂಗ್ ನ್ಯೂಸ್
29-05-25 03:34 pm HK News Desk ಕರ್ನಾಟಕ
ಹಾಸನ, ಮೇ 29 : ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ತಾಲೂಕಿನ ಕೆಲವತ್ತಿ ಗ್ರಾಮದ ಕವನ ಕೆ.ವಿ (21) ಹೃದಯಾಘಾತಕ್ಕೊಳಗಾದ ಯುವತಿ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಪದವಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಆಕೆ 3 ವಿಷಯಗಳ ಪರೀಕ್ಷೆ ಬರೆದಿದ್ದಳು. ಉಳಿದ ಮೂರು ವಿಷಯದ ಪರೀಕ್ಷೆಗಳನ್ನು ಬರೆಯಬೇಕಿತ್ತು.
ನಿನ್ನೆ ಸಂಜೆ ಪರೀಕ್ಷೆ ಮುಗಿಸಿ ಮನೆಗೆ ಬಂದಿದ್ದಾಳೆ. ತಾಯಿ ಕುಡಿಯುವ ನೀರು ತರಲು ಹೇಳಿದ್ದು, ಅದರಂತೆ ಆಕೆ ಶುದ್ಧ ಕುಡಿಯುವ ನೀರಿನ ಘಟಕದಿಂದ ಮನೆಗೆ ನೀರು ತರುವಾಗ ಕವನಾಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನಾ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದಳು. ಕೂಡಲೇ ಪೋಷಕರು ಆಕೆಯನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಾಗಲೇ ಕವನಾ ಕೊನೆಯುಸಿರೆಳೆದಿದ್ದಳು.
ಸದ್ಯ ಮದುವೆ ವಯಸ್ಸಿಗೆ ಬಂದ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸಹಪಾಠಿಗಳು ಹಾಗೂ ಕಾಲೇಜು ಉಪನ್ಯಾಸಕ ವರ್ಗದಲ್ಲಿಯೂ ಶೋಕ ಮಡುಗಟ್ಟಿದೆ. ಇಂದು ಪರೀಕ್ಷೆ ಇದ್ದರೂ ಕೂಡಾ ಕೆಲವು ಸ್ನೇಹಿತರು ಮತ್ತು ಪ್ರಾಧ್ಯಾಪಕ ವರ್ಗ ಕೆಲವತ್ತಿಗೆ ತೆರಳಿ ಆಕೆಯ ಅಂತಿಮ ದರ್ಶನ ಪಡೆದಿದ್ದಾರೆ.
ವಾರದ ಹಿಂದೆ ಸಂಧ್ಯಾ ಸಾವು:
ಇತ್ತೀಚೆಗೆ ಯುವಕ - ಯುವತಿಯರಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆ. ಒತ್ತಡದಿಂದಲೋ, ಆಹಾರ ಪದ್ಧತಿಯಿಂದಲೋ ಗೊತ್ತಿಲ್ಲ. ಹಾಸನದಲ್ಲಿ ವಾರದ ಹಿಂದಷ್ಟೆ ಸಂಧ್ಯಾ ಎಂಬ ಯುವತಿ ಹೃದಯಾಘಾತಕ್ಕೆ ಬಲಿಯಾಗಿದ್ದಳು.
ಮೇ. 21ರಂದು ಹೊಳೆನರಸೀಪುರ ಪಟ್ಟಣದ ವೆಂಕಟೇಶ್ - ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಕಾಲೇಜಿನಲ್ಲಿ ಸ್ವಲ್ಪ ಕೆಲಸವಿದೆ. ಹೋಗಬೇಕು ಎಂದು ಪೋಷಕರಿಗೆ ತಿಳಿಸಿದ್ದಳು. ಎಂದಿನಂತೆ ನಿತ್ಯ ಕರ್ಮ ಮುಗಿಸಿ, ಸ್ನಾನ ಮಾಡಲು ಬಾತ್ ರೂಂ ಗೆ ಹೋಗಿದ್ದಾಳೆ. ಸಾಕಷ್ಟು ಸಮಯವಾದರೂ, ಸಂಧ್ಯಾ ಬಾರದ ಹಿನ್ನೆಲೆಯಲ್ಲಿ, ಸ್ನಾನದ ಮನೆಯ ಬಾಗಿಲು ಒಡೆದು ನೋಡಿದಾಗ ಆಕೆ ಕುಸಿದು ಬಿದ್ದಿದ್ದಳು.
ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲು ಪ್ರಯತ್ನ ಪಟ್ಟಿದ್ದು, ಅಷ್ಟೊತ್ತಿಗಾಗಲೇ ಸಂಧ್ಯಾ ಉಸಿರು ನಿಲ್ಲಿಸಿದ್ದಳು. ಸಂದ್ಯ ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಗೆ ಒಳಗಾಗಿದ್ದಳು ಎಂದು ತಿಳಿದು ಬಂದಿತ್ತು. ಸದ್ಯ ಹಾಸನ ಗ್ರಾಮಾಂತರ ಮತ್ತು ಹೊಳೆನರಸೀಫುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.
Another Young Woman Dies of Heart Attack in Hassan, Collapsed While Fetching Drinking Water for Mother, Second Case in a Week.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am