ಬ್ರೇಕಿಂಗ್ ನ್ಯೂಸ್
29-05-25 03:34 pm HK News Desk ಕರ್ನಾಟಕ
ಹಾಸನ, ಮೇ 29 : ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ತಾಲೂಕಿನ ಕೆಲವತ್ತಿ ಗ್ರಾಮದ ಕವನ ಕೆ.ವಿ (21) ಹೃದಯಾಘಾತಕ್ಕೊಳಗಾದ ಯುವತಿ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಪದವಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಆಕೆ 3 ವಿಷಯಗಳ ಪರೀಕ್ಷೆ ಬರೆದಿದ್ದಳು. ಉಳಿದ ಮೂರು ವಿಷಯದ ಪರೀಕ್ಷೆಗಳನ್ನು ಬರೆಯಬೇಕಿತ್ತು.
ನಿನ್ನೆ ಸಂಜೆ ಪರೀಕ್ಷೆ ಮುಗಿಸಿ ಮನೆಗೆ ಬಂದಿದ್ದಾಳೆ. ತಾಯಿ ಕುಡಿಯುವ ನೀರು ತರಲು ಹೇಳಿದ್ದು, ಅದರಂತೆ ಆಕೆ ಶುದ್ಧ ಕುಡಿಯುವ ನೀರಿನ ಘಟಕದಿಂದ ಮನೆಗೆ ನೀರು ತರುವಾಗ ಕವನಾಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನಾ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದಳು. ಕೂಡಲೇ ಪೋಷಕರು ಆಕೆಯನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಾಗಲೇ ಕವನಾ ಕೊನೆಯುಸಿರೆಳೆದಿದ್ದಳು.
ಸದ್ಯ ಮದುವೆ ವಯಸ್ಸಿಗೆ ಬಂದ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸಹಪಾಠಿಗಳು ಹಾಗೂ ಕಾಲೇಜು ಉಪನ್ಯಾಸಕ ವರ್ಗದಲ್ಲಿಯೂ ಶೋಕ ಮಡುಗಟ್ಟಿದೆ. ಇಂದು ಪರೀಕ್ಷೆ ಇದ್ದರೂ ಕೂಡಾ ಕೆಲವು ಸ್ನೇಹಿತರು ಮತ್ತು ಪ್ರಾಧ್ಯಾಪಕ ವರ್ಗ ಕೆಲವತ್ತಿಗೆ ತೆರಳಿ ಆಕೆಯ ಅಂತಿಮ ದರ್ಶನ ಪಡೆದಿದ್ದಾರೆ.

ವಾರದ ಹಿಂದೆ ಸಂಧ್ಯಾ ಸಾವು:
ಇತ್ತೀಚೆಗೆ ಯುವಕ - ಯುವತಿಯರಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆ. ಒತ್ತಡದಿಂದಲೋ, ಆಹಾರ ಪದ್ಧತಿಯಿಂದಲೋ ಗೊತ್ತಿಲ್ಲ. ಹಾಸನದಲ್ಲಿ ವಾರದ ಹಿಂದಷ್ಟೆ ಸಂಧ್ಯಾ ಎಂಬ ಯುವತಿ ಹೃದಯಾಘಾತಕ್ಕೆ ಬಲಿಯಾಗಿದ್ದಳು.
ಮೇ. 21ರಂದು ಹೊಳೆನರಸೀಪುರ ಪಟ್ಟಣದ ವೆಂಕಟೇಶ್ - ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಕಾಲೇಜಿನಲ್ಲಿ ಸ್ವಲ್ಪ ಕೆಲಸವಿದೆ. ಹೋಗಬೇಕು ಎಂದು ಪೋಷಕರಿಗೆ ತಿಳಿಸಿದ್ದಳು. ಎಂದಿನಂತೆ ನಿತ್ಯ ಕರ್ಮ ಮುಗಿಸಿ, ಸ್ನಾನ ಮಾಡಲು ಬಾತ್ ರೂಂ ಗೆ ಹೋಗಿದ್ದಾಳೆ. ಸಾಕಷ್ಟು ಸಮಯವಾದರೂ, ಸಂಧ್ಯಾ ಬಾರದ ಹಿನ್ನೆಲೆಯಲ್ಲಿ, ಸ್ನಾನದ ಮನೆಯ ಬಾಗಿಲು ಒಡೆದು ನೋಡಿದಾಗ ಆಕೆ ಕುಸಿದು ಬಿದ್ದಿದ್ದಳು.
ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲು ಪ್ರಯತ್ನ ಪಟ್ಟಿದ್ದು, ಅಷ್ಟೊತ್ತಿಗಾಗಲೇ ಸಂಧ್ಯಾ ಉಸಿರು ನಿಲ್ಲಿಸಿದ್ದಳು. ಸಂದ್ಯ ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಗೆ ಒಳಗಾಗಿದ್ದಳು ಎಂದು ತಿಳಿದು ಬಂದಿತ್ತು. ಸದ್ಯ ಹಾಸನ ಗ್ರಾಮಾಂತರ ಮತ್ತು ಹೊಳೆನರಸೀಫುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.
Another Young Woman Dies of Heart Attack in Hassan, Collapsed While Fetching Drinking Water for Mother, Second Case in a Week.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm