H.S. Venkatesha Murthy, Death: ಕನ್ನಡದ ಪ್ರಸಿದ್ಧ ಕವಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ ; 'ಲೋಕದ ಕಣ್ಣಿಗೆ ರಾಧೆಯು ಕೂಡಾ.., ಅಮ್ಮಾ ನಾನು ದೇವರಾಣೆ..' ಗೀತೆಗಳ ಸೃಷ್ಟಿಕರ್ತ ಎಚ್ಎಸ್ವಿ 

30-05-25 11:13 am       Bangalore Correspondent   ಕರ್ನಾಟಕ

ಕನ್ನಡದ ಪ್ರಖ್ಯಾತ ಕವಿ ಎಚ್.ಎಸ್ ವೆಂಕಟೇಶಮೂರ್ತಿ ಅಲ್ಪಕಾಲದ ಅಸೌಖ್ಯದ ಬಳಿಕ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಎಚ್ಎಸ್‌ವಿ ಎಂದೇ ಚಿರಪರಿಚಿತರಾಗಿದ್ದ ವೆಂಕಟೇಶ ಮೂರ್ತಿ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ಅನೇಕ ಕವಿತೆ, ನಾಟಕ, ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ. 

ಬೆಂಗಳೂರು, ಮೇ 30 : ಕನ್ನಡದ ಪ್ರಖ್ಯಾತ ಕವಿ ಎಚ್.ಎಸ್ ವೆಂಕಟೇಶಮೂರ್ತಿ ಅಲ್ಪಕಾಲದ ಅಸೌಖ್ಯದ ಬಳಿಕ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಎಚ್ಎಸ್‌ವಿ ಎಂದೇ ಚಿರಪರಿಚಿತರಾಗಿದ್ದ ವೆಂಕಟೇಶ ಮೂರ್ತಿ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ಅನೇಕ ಕವಿತೆ, ನಾಟಕ, ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ. 

ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್.ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 11ರಿಂದ 2 ಗಂಟೆಯ ತನಕ ನಗರದ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ.

ವೆಂಕಟೇಶಮೂರ್ತಿ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಅವರ ತಂದೆ ನಾರಾಯಣ ಭಟ್ಟ ಮತ್ತು ತಾಯಿ ನಾಗರತ್ನಮ್ಮ. ಎಚ್‌ಎಸ್‌ವಿ ಅವರು ತಮ್ಮ ಬಾಲ್ಯವನ್ನು ಗ್ರಾಮೀಣ ಪರಿಸರದಲ್ಲಿ ಕಳೆದಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂಎ ಪದವಿ ಪಡೆದಿದ್ದು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. "ಕನ್ನಡದಲ್ಲಿ ಕಥನ ಕವನಗಳು" ಎಂಬ ಮಹಾಪ್ರಬಂಧಕ್ಕೆ ಪಿಎಚ್ ಡಿ ಪದವಿ ಪಡೆದಿದ್ದಾರೆ. 100ಕ್ಕೂ ಹೆಚ್ಚು ಕನ್ನಡ ಕೃತಿಗಳನ್ನು ರಚಿಸಿದ್ದಾರೆ. 

'ಲೋಕದ ಕಣ್ಣಿಗೆ ರಾಧೆಯು ಕೂಡಾ..' ಇವರ ಪ್ರಸಿದ್ಧಿ ಪಡೆದ ಭಾವಗೀತೆಗಳಲ್ಲಿ ಒಂದು. ಇವರು ಬರೆದ ಅಮ್ಮಾ ನಾನು ದೇವರಾಣೆ ಭಾವಗೀತೆ, ಐದು ಬೆರಳು ಕೂಡಿ ಮುಷ್ಟಿಯೂ.. ದೇಶಭಕ್ತಿ ಗೀತೆ ಪದ್ಯಗಳು ಬಹಳ ಪ್ರಸಿದ್ಧಿ ಪಡೆದಿ

Kannada poet H.S. Venkatesha Murthy (HSV), 81, passed away in Bengaluru on May 30. He was suffering from age-related ailments.