ಬ್ರೇಕಿಂಗ್ ನ್ಯೂಸ್
31-05-25 04:33 pm HK News Desk ಕರ್ನಾಟಕ
ಕಾರ್ಕಳ, ಮೇ 31 : ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ ನಸುಕಿನ ವೇಳೆಗೆ ನಡೆದ ಅಗ್ನಿ ದುರಂತದಲ್ಲಿ ಕರಾವಳಿಯ ಕಂಬಳದಲ್ಲಿ ಜನಪ್ರಿಯರಾಗಿರುವ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ದುರಂತ ಸಾವಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ಬೆಳಗ್ಗೆ ಕೆಲಸದಾಳು ಹಟ್ಟಿಗೆ ತೆರಳಿದಾಗ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು ಕಂಡುಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಚಾಂಪ್ಯನ್ ಶಿಪ್ ಗಳನ್ನು ಗೆದ್ದಿದ್ದ ಅಪ್ಪು ಮತ್ತು ತೋನ್ಸೆ ಕೋಣಗಳ ಸಾವು ಕಂಬಳ ಪ್ರೇಮಿಗಳಿಗೆ ಆಘಾತ ತಂದಿದೆ. ಬೆಂಕಿ ಹೇಗೆ ಉಂಟಾಯಿತು, ಇದರ ಹಿಂದೆ ಯಾರದ್ದಾದರೂ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ.





ಅಪ್ಪು ಕೋಣಗಳ ಜೋಡಿಯು ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಗೆದ್ದು ಜನಪ್ರಿಯರಾಗಿದ್ದವು. 2022-23ರ ಸಾಲಿನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸರಣಿ ಶ್ರೇಷ್ಠ ಬಿರುದು ಪಡೆದಿತ್ತು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಕೋಣವನ್ನು 15 ವರ್ಷಗಳ ಹಿಂದೆ ಅಲೆವೂರು ತೆಂಕುಮನೆ ರಾಘು ಶೆಟ್ಟಿಯವರಿಂದ ಖರೀದಿಸಿ ಬೇಲಾಡಿ ಅಶೋಕ್ ಶೆಟ್ಟಿಯವರು ಕಂಬಳದಲ್ಲಿ ಪಳಗಿಸಿದ್ದರು. ಈ ನಡುವೆ, ಕರಿಂಜೆ ವಿನು ವಿಶ್ವನಾಥ ಶೆಟ್ಟಿಯವರ ಬಳಿಯೂ ಈ ಕೋಣ ಇತ್ತು. ಹಗ್ಗ ಹಿರಿಯ ವಿಭಾಗದಲ್ಲಿ 10-12 ವರ್ಷಗಳಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನದಾಗಿಸಿತ್ತು. ಇಂಥ ಕೋಣಗಳ ಜೋಡಿ ಅಗ್ನಿ ದುರಂತದಲ್ಲಿ ಜೀವಂತ ದಹನವಾಗಿರುವುದು ಕಂಬಳ ಪ್ರಿಯರನ್ನು ಮತ್ತು ಅದನ್ನು ಸಲಹಿ ಸಾಕುತ್ತಿದ್ದ ಮಾಲೀಕರು ಮತ್ತು ಕೆಲಸದವರನ್ನು ರೋದಿಸುವಂತೆ ಮಾಡಿದೆ.
Karkala Appu, Decorated Winner of Hundreds of Kambala Awards, and Pair of Thonse Buffaloes Burnt Alive in Tragic Fire at Beladi Home.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm