ಬ್ರೇಕಿಂಗ್ ನ್ಯೂಸ್
31-05-25 04:33 pm HK News Desk ಕರ್ನಾಟಕ
ಕಾರ್ಕಳ, ಮೇ 31 : ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ ನಸುಕಿನ ವೇಳೆಗೆ ನಡೆದ ಅಗ್ನಿ ದುರಂತದಲ್ಲಿ ಕರಾವಳಿಯ ಕಂಬಳದಲ್ಲಿ ಜನಪ್ರಿಯರಾಗಿರುವ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ದುರಂತ ಸಾವಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ಬೆಳಗ್ಗೆ ಕೆಲಸದಾಳು ಹಟ್ಟಿಗೆ ತೆರಳಿದಾಗ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು ಕಂಡುಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಚಾಂಪ್ಯನ್ ಶಿಪ್ ಗಳನ್ನು ಗೆದ್ದಿದ್ದ ಅಪ್ಪು ಮತ್ತು ತೋನ್ಸೆ ಕೋಣಗಳ ಸಾವು ಕಂಬಳ ಪ್ರೇಮಿಗಳಿಗೆ ಆಘಾತ ತಂದಿದೆ. ಬೆಂಕಿ ಹೇಗೆ ಉಂಟಾಯಿತು, ಇದರ ಹಿಂದೆ ಯಾರದ್ದಾದರೂ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ.





ಅಪ್ಪು ಕೋಣಗಳ ಜೋಡಿಯು ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಗೆದ್ದು ಜನಪ್ರಿಯರಾಗಿದ್ದವು. 2022-23ರ ಸಾಲಿನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸರಣಿ ಶ್ರೇಷ್ಠ ಬಿರುದು ಪಡೆದಿತ್ತು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಕೋಣವನ್ನು 15 ವರ್ಷಗಳ ಹಿಂದೆ ಅಲೆವೂರು ತೆಂಕುಮನೆ ರಾಘು ಶೆಟ್ಟಿಯವರಿಂದ ಖರೀದಿಸಿ ಬೇಲಾಡಿ ಅಶೋಕ್ ಶೆಟ್ಟಿಯವರು ಕಂಬಳದಲ್ಲಿ ಪಳಗಿಸಿದ್ದರು. ಈ ನಡುವೆ, ಕರಿಂಜೆ ವಿನು ವಿಶ್ವನಾಥ ಶೆಟ್ಟಿಯವರ ಬಳಿಯೂ ಈ ಕೋಣ ಇತ್ತು. ಹಗ್ಗ ಹಿರಿಯ ವಿಭಾಗದಲ್ಲಿ 10-12 ವರ್ಷಗಳಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನದಾಗಿಸಿತ್ತು. ಇಂಥ ಕೋಣಗಳ ಜೋಡಿ ಅಗ್ನಿ ದುರಂತದಲ್ಲಿ ಜೀವಂತ ದಹನವಾಗಿರುವುದು ಕಂಬಳ ಪ್ರಿಯರನ್ನು ಮತ್ತು ಅದನ್ನು ಸಲಹಿ ಸಾಕುತ್ತಿದ್ದ ಮಾಲೀಕರು ಮತ್ತು ಕೆಲಸದವರನ್ನು ರೋದಿಸುವಂತೆ ಮಾಡಿದೆ.
Karkala Appu, Decorated Winner of Hundreds of Kambala Awards, and Pair of Thonse Buffaloes Burnt Alive in Tragic Fire at Beladi Home.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm