ಬ್ರೇಕಿಂಗ್ ನ್ಯೂಸ್
31-05-25 04:33 pm HK News Desk ಕರ್ನಾಟಕ
ಕಾರ್ಕಳ, ಮೇ 31 : ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ ನಸುಕಿನ ವೇಳೆಗೆ ನಡೆದ ಅಗ್ನಿ ದುರಂತದಲ್ಲಿ ಕರಾವಳಿಯ ಕಂಬಳದಲ್ಲಿ ಜನಪ್ರಿಯರಾಗಿರುವ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ದುರಂತ ಸಾವಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ಬೆಳಗ್ಗೆ ಕೆಲಸದಾಳು ಹಟ್ಟಿಗೆ ತೆರಳಿದಾಗ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು ಕಂಡುಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಚಾಂಪ್ಯನ್ ಶಿಪ್ ಗಳನ್ನು ಗೆದ್ದಿದ್ದ ಅಪ್ಪು ಮತ್ತು ತೋನ್ಸೆ ಕೋಣಗಳ ಸಾವು ಕಂಬಳ ಪ್ರೇಮಿಗಳಿಗೆ ಆಘಾತ ತಂದಿದೆ. ಬೆಂಕಿ ಹೇಗೆ ಉಂಟಾಯಿತು, ಇದರ ಹಿಂದೆ ಯಾರದ್ದಾದರೂ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ.





ಅಪ್ಪು ಕೋಣಗಳ ಜೋಡಿಯು ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಗೆದ್ದು ಜನಪ್ರಿಯರಾಗಿದ್ದವು. 2022-23ರ ಸಾಲಿನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸರಣಿ ಶ್ರೇಷ್ಠ ಬಿರುದು ಪಡೆದಿತ್ತು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಕೋಣವನ್ನು 15 ವರ್ಷಗಳ ಹಿಂದೆ ಅಲೆವೂರು ತೆಂಕುಮನೆ ರಾಘು ಶೆಟ್ಟಿಯವರಿಂದ ಖರೀದಿಸಿ ಬೇಲಾಡಿ ಅಶೋಕ್ ಶೆಟ್ಟಿಯವರು ಕಂಬಳದಲ್ಲಿ ಪಳಗಿಸಿದ್ದರು. ಈ ನಡುವೆ, ಕರಿಂಜೆ ವಿನು ವಿಶ್ವನಾಥ ಶೆಟ್ಟಿಯವರ ಬಳಿಯೂ ಈ ಕೋಣ ಇತ್ತು. ಹಗ್ಗ ಹಿರಿಯ ವಿಭಾಗದಲ್ಲಿ 10-12 ವರ್ಷಗಳಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನದಾಗಿಸಿತ್ತು. ಇಂಥ ಕೋಣಗಳ ಜೋಡಿ ಅಗ್ನಿ ದುರಂತದಲ್ಲಿ ಜೀವಂತ ದಹನವಾಗಿರುವುದು ಕಂಬಳ ಪ್ರಿಯರನ್ನು ಮತ್ತು ಅದನ್ನು ಸಲಹಿ ಸಾಕುತ್ತಿದ್ದ ಮಾಲೀಕರು ಮತ್ತು ಕೆಲಸದವರನ್ನು ರೋದಿಸುವಂತೆ ಮಾಡಿದೆ.
Karkala Appu, Decorated Winner of Hundreds of Kambala Awards, and Pair of Thonse Buffaloes Burnt Alive in Tragic Fire at Beladi Home.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm