ಬ್ರೇಕಿಂಗ್ ನ್ಯೂಸ್
31-05-25 04:33 pm HK News Desk ಕರ್ನಾಟಕ
ಕಾರ್ಕಳ, ಮೇ 31 : ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ ನಸುಕಿನ ವೇಳೆಗೆ ನಡೆದ ಅಗ್ನಿ ದುರಂತದಲ್ಲಿ ಕರಾವಳಿಯ ಕಂಬಳದಲ್ಲಿ ಜನಪ್ರಿಯರಾಗಿರುವ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ದುರಂತ ಸಾವಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ಬೆಳಗ್ಗೆ ಕೆಲಸದಾಳು ಹಟ್ಟಿಗೆ ತೆರಳಿದಾಗ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು ಕಂಡುಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಚಾಂಪ್ಯನ್ ಶಿಪ್ ಗಳನ್ನು ಗೆದ್ದಿದ್ದ ಅಪ್ಪು ಮತ್ತು ತೋನ್ಸೆ ಕೋಣಗಳ ಸಾವು ಕಂಬಳ ಪ್ರೇಮಿಗಳಿಗೆ ಆಘಾತ ತಂದಿದೆ. ಬೆಂಕಿ ಹೇಗೆ ಉಂಟಾಯಿತು, ಇದರ ಹಿಂದೆ ಯಾರದ್ದಾದರೂ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ.
ಅಪ್ಪು ಕೋಣಗಳ ಜೋಡಿಯು ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಗೆದ್ದು ಜನಪ್ರಿಯರಾಗಿದ್ದವು. 2022-23ರ ಸಾಲಿನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸರಣಿ ಶ್ರೇಷ್ಠ ಬಿರುದು ಪಡೆದಿತ್ತು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಕೋಣವನ್ನು 15 ವರ್ಷಗಳ ಹಿಂದೆ ಅಲೆವೂರು ತೆಂಕುಮನೆ ರಾಘು ಶೆಟ್ಟಿಯವರಿಂದ ಖರೀದಿಸಿ ಬೇಲಾಡಿ ಅಶೋಕ್ ಶೆಟ್ಟಿಯವರು ಕಂಬಳದಲ್ಲಿ ಪಳಗಿಸಿದ್ದರು. ಈ ನಡುವೆ, ಕರಿಂಜೆ ವಿನು ವಿಶ್ವನಾಥ ಶೆಟ್ಟಿಯವರ ಬಳಿಯೂ ಈ ಕೋಣ ಇತ್ತು. ಹಗ್ಗ ಹಿರಿಯ ವಿಭಾಗದಲ್ಲಿ 10-12 ವರ್ಷಗಳಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನದಾಗಿಸಿತ್ತು. ಇಂಥ ಕೋಣಗಳ ಜೋಡಿ ಅಗ್ನಿ ದುರಂತದಲ್ಲಿ ಜೀವಂತ ದಹನವಾಗಿರುವುದು ಕಂಬಳ ಪ್ರಿಯರನ್ನು ಮತ್ತು ಅದನ್ನು ಸಲಹಿ ಸಾಕುತ್ತಿದ್ದ ಮಾಲೀಕರು ಮತ್ತು ಕೆಲಸದವರನ್ನು ರೋದಿಸುವಂತೆ ಮಾಡಿದೆ.
Karkala Appu, Decorated Winner of Hundreds of Kambala Awards, and Pair of Thonse Buffaloes Burnt Alive in Tragic Fire at Beladi Home.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am