ಬ್ರೇಕಿಂಗ್ ನ್ಯೂಸ್
31-05-25 09:38 pm HK News Desk ಕರ್ನಾಟಕ
ಮಂಡ್ಯ, ಮೇ.30: ಕರಾವಳಿ ಭಾಗದಲ್ಲಿ ಸರಣಿ ಕೊಲೆಗಳ ಹಿನ್ನಲೆಯಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ ಮುಂದಿಟ್ಟುಕೊಂಡು ಹಿಂದು ಕಾರ್ಯಕರ್ತರನ್ನು ಸುಮ್ಮನೆ ಬಂಧಿಸಲಾಗುತ್ತಿದೆ. ಆ ಮೂಲಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದಕ್ಕಾಗಿ ಕೋಮು ನಿಗ್ರಹದಳವನ್ನು ರಾಜ್ಯ ಸರಕಾರ ಸ್ಥಾಪನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಪೊಲೀಸರು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಹಿಂದು ಕಾರ್ಯಕರ್ತರನ್ನು ಬಂಧಿಸಿದರೆ ಪರಿಸ್ಥಿತಿ ಮಿತಿ ಮೀರಲಿದೆ. ಅದಕ್ಕೆ ಕಾಂಗ್ರೆಸ್ ಸರಕಾರ, ಸಿಎಂ, ಗೃಹ ಸಚಿವರು ಹೊಣೆಯಾಗುತ್ತಾರೆ. ಇದು ಕಾಂಗ್ರೆಸ್ ಸರಕಾರಕ್ಕೆ ಶೋಭೆ ತರಲ್ಲ ಎಂದು ಆಕ್ಷೇಪಿಸಿದರು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದಾಗ ಇಂಟಲಿಜೆನ್ಸ್ ಬಗ್ಗೆ ಕಾಂಗ್ರೆಸ್ನವರು ಮಾತನಾಡಿದ್ದರು. ಆದರೀಗ ಮಂಗಳೂರಿನಲ್ಲಿ ಕೊಲೆಯಾಗುತ್ತಿದೆ. ಈಗ ರಾಜ್ಯ ಸರಕಾರ ಏನು ಮಾಡುತ್ತಿದೆ? ಇವರ ಬಳಿ ಇಂಟಲಿಜೆನ್ಸ್ ಇಲ್ಲವೇ?" ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಮಳೆ ಅವಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಳೆ ಅವಾಂತರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದಿಂದ ತಂಡ ಮಾಡಲು ತೀರ್ಮಾನಿಸಲಾಗಿದೆ. ಪಕ್ಷದ ನಾಯಕರು ಹಾಗೂ ಮುಖಂಡರು ಪ್ರವಾಸ ಕೈಗೊಳ್ಳಲು ಹೇಳಿದ್ದೇನೆ. ರಾಜ್ಯ ಸರಕಾರ ಗ್ಯಾರಂಟಿಯ ಅಮಲಿನಲ್ಲಿದೆ. ಇಷ್ಟೆಲ್ಲ ಮಳೆಯಾದರೂ ಕೂಡ ರೈತರಿಗೆ ಬಿತ್ತನೆ ಬೀಜ ಕೊಟ್ಟಿಲ್ಲ. ಇದರಿಂದ ರೈತರು ಪರದಾಡುತ್ತಿದ್ದಾರೆ. ರಾಜ್ಯ ಸರಕಾರ ಎಚ್ಚೆತ್ತು ರೈತರಿಗೆ ಅನುಕೂಲವಾಗುವ ಕೆಲಸ ಮಾಡಬೇಕು' ಎಂದು ಆಗ್ರಹಿಸಿದರು.
Mangalore Serial Killings, Hindus Unfairly Targeted Over Muslim Youth’s Murder, Warns B Y Vijayendra.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm