ಬ್ರೇಕಿಂಗ್ ನ್ಯೂಸ್
01-06-25 11:50 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್.1: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚತ್ತಿರುವ ಪೊಲೀಸ್ ಇಲಾಖೆ ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ನಿಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಕುರಿತು ಶನಿವಾರ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳನ್ನು ನಿಲ್ಲಿಸಿ ಕೀ ಕಸಿದು ಅಡ್ಡಿ ಪಡಿಸಬಾರದು. ಬೈಕ್ ಹಿಂಬದಿ ಕುಳಿತಿರುವ ಸವಾರನನ್ನು ಹಿಡಿದೆಳೆಯುವುದು ಮಾಡುವಂತಿಲ್ಲ. ಪ್ರಮುಖವಾಗಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಜಾರಿಯಿರುವ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ತಂತ್ರಜ್ಞಾನ ಆಧರಿತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ಅತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಬೆನ್ನಟ್ಟುವ ಬದಲಿಗೆ ವಾಹನಗಳ ಸಂಖ್ಯೆ ಗುರುತು ಮಾಡಿಕೊಂಡು ಜಿಲ್ಲಾ ಸರಹದ್ದುಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಬೇಕು. ಸಂಚಾರ ನಿಯಮ ಉಲ್ಲಂಘನೆ ಸಲುವಾಗಿ ವಾಹನಗಳನ್ನು ತಪಾಸಣೆ ಮಾಡುವಾಗ ಪ್ರತಿಫಲನ ಜಾಕೆಟ್ ಗಳನ್ನು ಧರಿಸಬೇಕು. ಸಂಜೆ ವೇಳೆ ಎಲ್ ಇಡಿ ಬಟನ್ ಗಳನ್ನು ಉಪಯೋಗಿಸಬೇಕು. ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
Director General and Inspector General of Police (DG&IGP) M A Saleem on Saturday issued new guidelines to the traffic policemen in the state.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm