ಬ್ರೇಕಿಂಗ್ ನ್ಯೂಸ್
01-06-25 09:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 1 : ವಿಶ್ವ ತಂಬಾಕು ರಹಿತ ದಿನದಂದು 'ಸಾರ್ವಜನಿಕ ಆರೋಗ್ಯ' ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. COTPA ಕಾಯ್ದೆಗೆ ತಿದ್ದುಪಡಿ ತಂದು ಹೊಗೆ ರಹಿತ ತಂಬಾಕು ಪದಾರ್ಥಗಳಿಗೆ ಕಡಿವಾಣ ಹಾಕುವುದರೊಂದಿಗೆ ಹುಕ್ಕಾ ಬ್ಯಾನ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮಕ್ಕೆ ಇದೀಗ ರಾಷ್ಟ್ರಪತಿಗಳಿಂದಲೂ ಮನ್ನಣೆ ದೊರೆತಿದ್ದು, ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವಷ್ಟೇ ಅಲ್ಲದೇ ಹೊಗೆ ರಹಿತ ತಂಬಾಕು ಪದಾರ್ಥಗಳನ್ನ ಸೇವಿಸಿ ಉಗಿಯುವಂತಿಲ್ಲ. ಸಿಗರೇಟ್ ಹೊರತಾಗಿಯೂ ಹೊಗೆ ರಹಿತ ತಂಬಾಕು ಪದಾರ್ಥಗಳು ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತಿದ್ದವು. ತಂಬಾಕು ಪದಾರ್ಥಗಳನ್ನ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಿ ಬೇಕೆಂದರಲ್ಲಿ ಉಗಿಯುವುದರಿಂದ ಗಾಳಿಯಲ್ಲಿ ಒಬ್ಬರಿಂದ ಒಬ್ಬರಿಗೆ ವೈರಸ್ ಹರಡಬಹುದು. ವಿಶೇಷವಾಗಿ ಕೋವಿಡ್ 19 ವೈರಸ್ ನಿಂದ ಸಾರ್ವಜನಿಕರು ತಮ್ಮನ್ನ ತಾವು ರಕ್ಷಿಸಿಕೊಕೊಳ್ಳುವುದು ಸವಾಲಾಗಿತ್ತು. ಅಲ್ಲದೇ ಟಿ.ಬಿ ಹೊಂದಿರುವ ರೋಗಿಗಳಿಗೂ ತೊಂದರೆ ಉಂಟಾಗಿತ್ತು.
ಈ ಸಮಸ್ಯೆಗಳನ್ನ ಸೂಕ್ಷ್ಮವಾಗಿ ಗಮನಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಹಿಂದೆ ಇದ್ದ COPTA ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಎರಡು ಸದನದಲ್ಲಿ ಅನುಮೋದನೆ ಪಡೆದಿದ್ದರು. ಇದು ಕೇಂದ್ರದ ಕಾಯ್ದೆಯಾಗಿದ್ದರಿಂದ ರಾಷ್ಟ್ರಪತಿಯವರ ಅನುಮೋದನೆಗೆ ಕಳಿಸಲಾಗಿತ್ತು. ರಾಜ್ಯ ಸರ್ಕಾರದ ಈ ಮಹತ್ವದ ಹೆಜ್ಜೆಗೆ ರಾಷ್ಟ್ರಪತಿಗಳಿಂದ ಅನುಮೋದನೆ ದೊರೆತಿದ್ದು, ರಾಜ್ಯ ಸರ್ಕಾರಿಂದ ಅಧಿಸೂಚನೆ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆಗೆ 200 ರೂ. ಇದ್ದ ದಂಡವನ್ನು 1000 ರೂಪಾಯಿ ವರೆಗೆ ಹೆಚ್ಚಿಸಲಾಗಿದೆ. 21 ವರ್ಷದ ಒಳಗಿನವರು ತಂಬಾಕು ಪದಾರ್ಥಗಳನ್ನ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಉಪಹಾರ ಗೃಹ, ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಹುಕ್ಕಾ ಬ್ಯಾನ್ ಮಾಡಲಾಗಿದ್ದು, ಹುಕ್ಕಾ ಬಾರ್ ವಿರುದ್ಧ ಕನಿಷ್ಠ 50 ಸಾವಿರದಿಂದ 1 ಲಕ್ಷ ದಂಡ, ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
Karnataka Tobacco Use Banned in Public Places rs 1,000 Fine, Hookah Also Prohibited.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm