ಬ್ರೇಕಿಂಗ್ ನ್ಯೂಸ್
01-06-25 09:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 1 : ವಿಶ್ವ ತಂಬಾಕು ರಹಿತ ದಿನದಂದು 'ಸಾರ್ವಜನಿಕ ಆರೋಗ್ಯ' ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. COTPA ಕಾಯ್ದೆಗೆ ತಿದ್ದುಪಡಿ ತಂದು ಹೊಗೆ ರಹಿತ ತಂಬಾಕು ಪದಾರ್ಥಗಳಿಗೆ ಕಡಿವಾಣ ಹಾಕುವುದರೊಂದಿಗೆ ಹುಕ್ಕಾ ಬ್ಯಾನ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮಕ್ಕೆ ಇದೀಗ ರಾಷ್ಟ್ರಪತಿಗಳಿಂದಲೂ ಮನ್ನಣೆ ದೊರೆತಿದ್ದು, ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವಷ್ಟೇ ಅಲ್ಲದೇ ಹೊಗೆ ರಹಿತ ತಂಬಾಕು ಪದಾರ್ಥಗಳನ್ನ ಸೇವಿಸಿ ಉಗಿಯುವಂತಿಲ್ಲ. ಸಿಗರೇಟ್ ಹೊರತಾಗಿಯೂ ಹೊಗೆ ರಹಿತ ತಂಬಾಕು ಪದಾರ್ಥಗಳು ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತಿದ್ದವು. ತಂಬಾಕು ಪದಾರ್ಥಗಳನ್ನ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಿ ಬೇಕೆಂದರಲ್ಲಿ ಉಗಿಯುವುದರಿಂದ ಗಾಳಿಯಲ್ಲಿ ಒಬ್ಬರಿಂದ ಒಬ್ಬರಿಗೆ ವೈರಸ್ ಹರಡಬಹುದು. ವಿಶೇಷವಾಗಿ ಕೋವಿಡ್ 19 ವೈರಸ್ ನಿಂದ ಸಾರ್ವಜನಿಕರು ತಮ್ಮನ್ನ ತಾವು ರಕ್ಷಿಸಿಕೊಕೊಳ್ಳುವುದು ಸವಾಲಾಗಿತ್ತು. ಅಲ್ಲದೇ ಟಿ.ಬಿ ಹೊಂದಿರುವ ರೋಗಿಗಳಿಗೂ ತೊಂದರೆ ಉಂಟಾಗಿತ್ತು.
ಈ ಸಮಸ್ಯೆಗಳನ್ನ ಸೂಕ್ಷ್ಮವಾಗಿ ಗಮನಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಹಿಂದೆ ಇದ್ದ COPTA ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಎರಡು ಸದನದಲ್ಲಿ ಅನುಮೋದನೆ ಪಡೆದಿದ್ದರು. ಇದು ಕೇಂದ್ರದ ಕಾಯ್ದೆಯಾಗಿದ್ದರಿಂದ ರಾಷ್ಟ್ರಪತಿಯವರ ಅನುಮೋದನೆಗೆ ಕಳಿಸಲಾಗಿತ್ತು. ರಾಜ್ಯ ಸರ್ಕಾರದ ಈ ಮಹತ್ವದ ಹೆಜ್ಜೆಗೆ ರಾಷ್ಟ್ರಪತಿಗಳಿಂದ ಅನುಮೋದನೆ ದೊರೆತಿದ್ದು, ರಾಜ್ಯ ಸರ್ಕಾರಿಂದ ಅಧಿಸೂಚನೆ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆಗೆ 200 ರೂ. ಇದ್ದ ದಂಡವನ್ನು 1000 ರೂಪಾಯಿ ವರೆಗೆ ಹೆಚ್ಚಿಸಲಾಗಿದೆ. 21 ವರ್ಷದ ಒಳಗಿನವರು ತಂಬಾಕು ಪದಾರ್ಥಗಳನ್ನ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಉಪಹಾರ ಗೃಹ, ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಹುಕ್ಕಾ ಬ್ಯಾನ್ ಮಾಡಲಾಗಿದ್ದು, ಹುಕ್ಕಾ ಬಾರ್ ವಿರುದ್ಧ ಕನಿಷ್ಠ 50 ಸಾವಿರದಿಂದ 1 ಲಕ್ಷ ದಂಡ, ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
Karnataka Tobacco Use Banned in Public Places rs 1,000 Fine, Hookah Also Prohibited.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm