ಬ್ರೇಕಿಂಗ್ ನ್ಯೂಸ್
01-06-25 10:08 pm HK News Desk ಕರ್ನಾಟಕ
ಶಿವಮೊಗ್ಗ, ಜೂನ್ 1 : ರಾಜ್ಯದಲ್ಲಿ ವೈಮಾನಿಕ ಸೌಲಭ್ಯ ವಿಸ್ತರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ತರಬೇತಿ ಸಂಸ್ಥೆ ಸ್ಥಾಪಿಸಲು ಮುಂದಾಗಿದೆ. ಆಮೂಲಕ ವಿಮಾನ ನಿಲ್ದಾಣ ರೆಡಿಯಾಗಿದ್ದರೂ, ಬಳಕೆಗೆ ಬಾರದ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸದುದ್ದೇಶಕ್ಕೆ ಬಳಸಿಕೊಳ್ಳಲು ಮುಂದಾಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಅಧೀನದ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿರ್ವಹಣೆ ಮಾಡುತ್ತಿದ್ದು ಇದೀಗ ವೈಮಾನಿಕ ತರಬೇತಿ ಸಂಸ್ಥೆ ಆರಂಭಿಸಲು ಟೆಂಡರ್ ಆಹ್ವಾನಿಸಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎಫ್ಟಿಒ ಸ್ಥಾಪನೆಗಾಗಿ 3,500 ಚದರ ಮೀ. ವಿಸ್ತೀರ್ಣದ ಜಾಗ ನೀಡಲಾಗುತ್ತಿದ್ದು, ಅದರಲ್ಲಿ 1,500 ಚದರ ಮೀ. ಅನ್ನು ವಿಮಾನಗಳ ಹ್ಯಾಂಗರ್ಗಳಿಗೆ, 2 ಸಾವಿರ ಚದರ ಮೀ. ತರಗತಿ ಕೊಠಡಿ, ಕಚೇರಿಗಳಿಗಾಗಿ ಬಳಸಿಕೊಳ್ಳಲಾಗುತ್ತದೆ. 2000 ಚದರ ಮೀಟರ್ ಜಾಗವನ್ನು ಟರ್ಮಿನಲ್ ಹೊರ ಭಾಗದಲ್ಲಿ ನೀಡಲಾಗುತ್ತಿದೆ. ಇಲ್ಲಿ ಕ್ಲಾಸ್ರೂಂ, ಸಿಮ್ಯುಲೇಟರ್ ವಿಭಾಗ, ಗ್ರಂಥಾಲಯ, ರೇಡಿಯೋ ಟೆಲಿಫೋನಿ ತರಬೇತಿ, ಟೆಸ್ಟಿಂಗ್ ರೂಮ್, ಕಚೇರಿಗಳು ಸೇರಿದಂತೆ ವಿವಿಧ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ.
ಕೆಎಸ್ಐಐಡಿಸಿ ಸಂಸ್ಥೆಯು ಫೈರ್ ಸೇಫ್ಟಿ, ಆಂಬ್ಯುಲೆನ್ಸ್ ಸೌಲಭ್ಯ, ಏರ್ ಟ್ರಾಫಿಕ್ ಕಂಟ್ರೋಲ್, ರನ್ ವೇ ನಿರ್ವಹಣೆ ಮಾಡಲಿದೆ. ತರಬೇತಿ ಸಂಸ್ಥೆ ಆರಂಭಿಸುವ ಏಜೆನ್ಸಿಯು ತನ್ನ ವ್ಯಾಪ್ತಿಯ ವಿದ್ಯುತ್ ಬಿಲ್, ಸೆಕ್ಯೂರಿಟಿ ಸೇರಿದಂತೆ ವಿವಿಧ ನಿರ್ವಹಣೆಗಳನ್ನು ತಾನೆ ಮಾಡಿಕೊಳ್ಳಬೇಕು. ಅಲ್ಲದೆ, ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ), ನಾಗರಿಕ ವಿಮಾನಯಾನ ಇಲಾಖೆ ಸೂಚಿಸಿರುವ ನಿಯಮಗಳ ಪ್ರಕಾರ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಪ್ರತಿ ವರ್ಷ 100 ಮಂದಿಗೆ ತರಬೇತಿ ನೀಡುವ ಗುರಿ ಇದೆ. ತರಬೇತಿ ಸಂಸ್ಥೆ ಆರಂಭಗೊಂಡ ಮೊದಲ ವರ್ಷ 50 ಅಭ್ಯರ್ಥಿಗಳನ್ನು ದಾಖಲು ಮಾಡಲಾಗುತ್ತದೆ. ಮೂರನೇ ವರ್ಷದ ಹೊತ್ತಿಗೆ 100 ಅಭ್ಯರ್ಥಿಗಳನ್ನು ದಾಖಲು ಮಾಡಿಕೊಳ್ಳಬೇಕು. ಶೇ.25 ಸೀಟುಗಳನ್ನು ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಕಾಯ್ದಿರಿಸಬೇಕು. ಅವರಿಗೆ ಶುಲ್ಕ ವಿನಾಯಿತಿ ಸಹ ನೀಡಬೇಕು. ಏಜೆನ್ಸಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೂ ಅದಕ್ಕೆ ಮುನ್ನ ಕೆಎಸ್ಐಐಡಿಸಿ ಅನುಮತಿ ಪಡೆಯಬೇಕು.
ಪ್ರತಿ ಚದರ ಮೀಟರ್ಗೆ ವಾರ್ಷಿಕ 650 ರೂ.ಗಳನ್ನು ಕೆಎಸ್ಐಐಡಿಸಿಗೆ ಏಜೆನ್ಸಿ ಸಂಸ್ಥೆ ಪಾವತಿಸಬೇಕು. ಪ್ರತಿ ಮೂರು ವರ್ಷಕ್ಕೆ ಈ ದರ ಶೇ.15ರಷ್ಟು ಹೆಚ್ಚಳವಾಗಲಿದೆ. ವಿಮಾನ ನಿಲ್ದಾಣ ಮತ್ತು ರನ್ವೇ ಬಳಕೆ ಮಾಡಿಕೊಳ್ಳುವಾಗ ಕೆಎಸ್ಐಐಡಿಸಿಯೊಂದಿಗೆ ಮಾಹಿತಿ ಪಡೆಯಬೇಕು. ದೈನಂದಿನ ಕಾರ್ಯಾಚರಣೆ, ಸರ್ಕಾರದ ವಿಮಾನಗಳು, ವಿವಿಐಪಿ ವಿಮಾನಗಳಿಗೆ ಮೊದಲ ಆದ್ಯತೆ ನೀಡಬೇಕು. ತರಬೇತಿ ಸಂಸ್ಥೆ ಕಾರ್ಯಾರಂಭ ಮಾಡಿದ ಮೂರು ತಿಂಗಳ ಒಳಗೆ ಮೂರು ವಿಮಾನಗಳನ್ನು ಹೊಂದಿಸಿಕೊಳ್ಳಬೇಕು ಎಂಬ ಷರತ್ತುಗಳನ್ನು ಹಾಕಲಾಗಿದೆ.
Flight Training Academy Planned at Shivamogga Airport, Govt Invites Tenders.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm