ಬ್ರೇಕಿಂಗ್ ನ್ಯೂಸ್
04-06-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4 : ಐಪಿಎಲ್ ಟ್ರೋಫಿ ಗೆದ್ದ ಆರ್ ಸಿಬಿ ಆಟಗಾರರ ಜೊತೆಗೆ ಅಭಿಮಾನಿಗಳ ಮೆರವಣಿಗೆ ಮಾಡಲು ಹೋಗಿ ದುರಂತವೇ ನಡೆದುಹೋಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಎದುರಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮೆರವಣಿಗೆ ಆಗುತ್ತಿದ್ದಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾಗಲೇ ಕಾಲ್ತುಳಿತ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ
ವಿಧಾನಸೌಧ ಎದುರಲ್ಲಿ ಆರ್ ಸಿಬಿ ಆಟಗಾರರನ್ನು ಸನ್ಮಾನಿಸಿ ಬೀದಿಯಲ್ಲಿ ಮೆರವಣಿಗೆ ನಡೆಸಲು ಸರಕಾರವೇ ಆಯೋಜನೆ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಸ್ಟೇಡಿಯಂ ಪಕ್ಕದಲ್ಲಿ ಸಾವಿರಾರು ಜನರು ಸೇರಿದ್ದು, ಮೆರವಣಿಗೆ ಆಗುತ್ತಿದ್ದಾಗಲೇ ಯುವಕರು ಜನರ ಮೈಮೇಲೆ ಬಿದ್ದಿದ್ದಾರೆ. ಮೆಡಿಕಲ್ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದ್ದರು. ಈ ವೇಳೆ, ಒಬ್ಬರ ಮೇಲೊಬ್ಬರು ಹತ್ತಿ ಘಟನೆ ಉಂಟಾಗಿದೆ ಎನ್ನಲಾಗುತ್ತಿದ್ದು, ಪೊಲೀಸರನ್ನು ಲೆಕ್ಕಿಸದೆ ಕಾಲ್ತುಳಿತ ಉಂಟಾಗಿದೆ. ಗೇಟ್ ಅನ್ನು ಒಂದೇ ಸಮಯದಲ್ಲಿ ಓಪನ್ ಮಾಡಿದ್ದರಿಂದ ಜನರು ಎಲ್ಲ ಕಡೆಯಿಂದ ತಳ್ಳಿಕೊಂಡು ಬಂದಿದ್ದು, ನೂಕುನುಗ್ಗಲು ಉಂಟಾಗಿದ್ದರಿಂದ ದುರಂತವೇ ನಡೆದುಹೋಗಿದೆ.







ಮೃತದರಲ್ಲಿ ಅಂಬೇಡ್ಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯೂ ಸೇರಿದ್ದಾಳೆ. 50ಕ್ಕೂ ಹೆಚ್ಚು ಮಂದಿಯನ್ನು ಶಿವಾಜಿನಗರದ ಬೌರಿಂಗ್ ಆಸ್ಪತ್ರೆ, ಮಲ್ಯ ಆಸ್ಪತ್ರೆಗಳಲ್ಲಿ ದಾಖಲು ಮಾಡಲಾಗಿದೆ. ಸತ್ತವರಲ್ಲಿ ಮಕ್ಕಳೂ ಇದ್ದಾರೆ, ಸದ್ಯಕ್ಕೆ ಮೃತರ ಬಗ್ಗೆ ಮಾಹಿತಿ ತಿಳಿದ ಹೆತ್ತವರು ಆಸ್ಪತ್ರೆಯತ್ತ ಧಾವಿಸಿದ್ದಾರೆ. ನಗರದ ವಿವಿಧ ಕಡೆಗಳಿಂದ ಅಭಿಮಾನಿಗಳು ಬಂದಿದ್ದರಿಂದ ಪೊಲೀಸರಿಗೆ ನಿರ್ವಹಣೆ ಮಾಡಲಾಗದೆ ದುರಂತ ಎದುರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿಯೇ ಆರ್ ಸಿಬಿ ಆಟಗಾರರಿಗೆ ಸನ್ಮಾನ, ಮೆರವಣಿಗೆ ಆಯೋಜಿಸಲಾಗಿತ್ತು. ಇಷ್ಟೊಂದು ಜನ ಸೇರುವುದನ್ನು ನಿರೀಕ್ಷಿಸಿರದ ಪೊಲೀಸರು ಮತ್ತು ರಾಜ್ಯ ಸರಕಾರದ ಎಡವಟ್ಟಿನಿಂದಲೇ ಘಟನೆ ಆಗಿಹೋಗಿದೆ. ಆರ್ ಸಿಬಿ ಸಂಭ್ರಮ ಹೆಸರಲ್ಲಿ ಸಾವಿರಾರು ಜನರು ಇಡೀ ಕುಟುಂಬವೇ ಬಂದು ನೆರೆದಿತ್ತು. ಮಕ್ಕಳನ್ನು ಕರೆದುಕೊಂಡು ಬಂದಿದ್ದು ಏಕಾಏಕಿ ನೂಕುನುಗ್ಗಲು ಉಂಟಾಗಿ ದುರಂತವೇ ನಡೆದುಹೋಗಿದೆ.
RCB victory parade in Bangalore, At least 10 dead in stampede, death toll expected to go up. 10 persons have died while 24 people, including a six-year-old girl, are believed to be injured as thousands of fans gathered outside the M. Chinnaswamy Stadium in Bengaluru to celebrate the victory of Royal Challengers Bengaluru in the IPL 2025 championship, on June 4. The death toll is expected to go up.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm