ಬ್ರೇಕಿಂಗ್ ನ್ಯೂಸ್
04-06-25 08:06 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 04 : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದ ಸಂಭ್ರಮಾಚರಣೆ ಸೂತಕವಾಗಿ ಬದಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ವಿವಿಧ ಗೇಟ್ಗಳಲ್ಲಿ ನಡೆದ ಕಾಲ್ತುಳಿತದಲ್ಲಿ 10 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಐಪಿಎಲ್ ಪಟ್ಟ ಗೆದ್ದಿರುವ ಆರ್ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, 'ಕನ್ನಡಿಗರ ಜನಪ್ರಿಯ ಆರ್ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ," ಎಂದು ಆರೋಪಿಸಿದ್ದಾರೆ.
"ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲಾ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಇವತ್ತು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ ಅದು ಕಷ್ಟ ಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದಿದ್ದಿದ್ದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ," ಎಂದು ವಾಗ್ದಾಳಿ ನಡೆಸಿದ್ದಾರೆ.
ಚಾಂಪಿಯನ್ ಆರ್ಸಿಬಿ ತಂಡವನ್ನ ಸ್ವಾಗತಿಸಲು, ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನು ಅಂದಾಜಿಸುವಲ್ಲಿ ಸರ್ಕಾರ ಎಡವಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಜನ ಸಂದಣಿ ನಿರೀಕ್ಷಿಸಿ ಹೆಚ್ಚಿನ ಕಾಲಾವಕಾಶ ತೆಗೆದುಕೊಂಡು ವಾರಾಂತ್ಯದಲ್ಲಿ ಈ ಕಾರ್ಯಕ್ರಮ ಮಾಡಬಹುದಿತ್ತು ಎನ್ನಿಸುತ್ತಿದೆ ಎಂದು ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿರುವ ಅವರು, ಮೃತ ದುರ್ದೈವಿಗಳ ಕುಟುಂಬಗಳ ದುಃಖದಲ್ಲಿ ಇಡೀ ರಾಜ್ಯವೇ ಭಾಗಿಯಾಗಿದೆ ಎಂದು ಹೇಳಿದ್ದಾರೆ.
Killer RCB Celebration, R Ashoka Blames Congress Govt for Stampede Tragedy, Demands Rs 25 Lakh Compensation for Victims Families.
06-06-25 10:43 am
Bangalore Correspondent
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm