ಬ್ರೇಕಿಂಗ್ ನ್ಯೂಸ್
05-06-25 04:31 pm Bengaluru Staff ಕರ್ನಾಟಕ
ಬೆಂಗಳೂರು, ಜೂನ್ 5: ಚಿನ್ನಸ್ವಾಮಿ ಕಾಲ್ತುಳಿತ ದುರಂತ ರಾಜಕೀಯ ಸ್ವರೂಪ ಪಡೆದಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಇದೇ ವೇಳೆ, ಆರ್ ಸಿಬಿ ತಂಡದ ಸನ್ಮಾನ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದ ಡಿಸಿಎಂ ಡಿಕೆ ಶಿವಕುಮಾರ್, ದುರಂತದ ಹೊಣೆ ಹೊರಲು ಸರ್ಕಾರ ಸಿದ್ಧ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, "ಇದು ರಾಜಕೀಯ ಮಾಡುವ ಸಮಯವಲ್ಲ. ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರ ಜೊತೆಗೆ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದರು. ಬಿಜೆಪಿ ಅವಧಿಯಲ್ಲಿ ಏನೆಲ್ಲಾ ಆಯ್ತು ಎಂದು ಚರ್ಚೆ ಮಾಡೋಕೆ ಹೋಗಲ್ಲ. ಬಿಜೆಪಿ ಹಾಗೂ ಜೆಡಿಎಸ್ ಯಾವತ್ತೂ ಹೆಣದ ಮೇಲೆ ರಾಜಕೀಯ ನಡೆಸಿದೆ. ನಾನು ಹಾಗೆ ಮಾಡುವುದಿಲ್ಲ. ಇದು ನಮ್ಮ ರಾಜ್ಯ ಮತ್ತು ಬೆಂಗಳೂರು ನಗರದ ವರ್ಚಸ್ಸಿನ ಪ್ರಶ್ನೆ. ನಾವು ಇದಕ್ಕೆ ಹೊಣೆ ಹೊತ್ತುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ನಾವು ಹೀಗಾಗಲಿದೆ ಎಂಬ ನಿರೀಕ್ಷೆ ಮಾಡಿರಲಿಲ್ಲ. ಜನರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಮೆಟ್ರೋ ಸಂಚಾರ ನಿಲ್ಲಿಸಿದ್ದೆವು. ಆದರೂ ಅಪಾರ ಜನಸ್ತೋಮವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಸರ್ಕಾರ ಈ ಕಾಲ್ತುಳಿತದ ದುರಂತ ಹೊರಲು ಸಿದ್ಧ ಎಂದು ಡಿಕೆ ಶಿವಕುಮಾರ್ ಹೇಳಿದರು. ಇದು ನಮ್ಮ ಕುಟುಂಬಕ್ಕೆ ಆದ ನೋವು. ಈ ನೋವನ್ನು ತಡೆದುಕೊಳ್ಳಲು ಯಾರಿಂದಲು ಸಾಧ್ಯವಿಲ್ಲ. ನಾನು ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಮಕ್ಕಳ ಸ್ಥಿತಿ ನೋಡಿ ನನಗೆ ಬೇಸರ ಆಗಿದೆ ಎಂದು ಭಾವುಕರಾದರು.
ಪೊಲೀಸ್ ಕಮಿಷನರ್ ನನ್ನ ಬಳಿ ಬಂದು ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿದ್ದು ಕಾರ್ಯಕ್ರಮ ಬೇಗ ಮುಗಿಸುವಂತೆ ಹೇಳಿದರು. ನಾನು ಕೂಡಲೇ ಕೆಸಿಎ ಆಡಳಿತ ಮಂಡಳಿಗೆ ಸೂಚನೆ ನೀಡಿ, ಕಾರ್ಯಕ್ರಮ ನಿಲ್ಲಿಸಿದೆ. ಅವರೂ ತಡ ಮಾಡದೇ ವಿಜಯೋತ್ಸವ ಕಾರ್ಯಕ್ರಮ ನಿಲ್ಲಿಸಿದರು. ಕಾಲ್ತುಳಿತ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡುತ್ತಿದ್ದಂತೆ, ಕ್ರೀಡಾಂಗಣದಲ್ಲಿ ಯಾರಿಗೂ ಮಾತನಾಡಲು ಅವಕಾಶ ಕೊಡಲಿಲ್ಲ. ಇಲ್ಲಿ ಯಾವುದೇ ಆರೋಪ, ಪ್ರತ್ಯಾರೋಪ ಮಾಡುವುದು ಬೇಡ. ಇದಕ್ಕೆಲ್ಲ ಸಂದರ್ಭ ಇದಲ್ಲ ಎಂದರು.
Bengaluru's Prestige at Stake, We Took Responsibility, Stopped Event as Commissioner Advised, DCM DK Shivakumar
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am