ಬ್ರೇಕಿಂಗ್ ನ್ಯೂಸ್
05-06-25 04:31 pm Bengaluru Staff ಕರ್ನಾಟಕ
ಬೆಂಗಳೂರು, ಜೂನ್ 5: ಚಿನ್ನಸ್ವಾಮಿ ಕಾಲ್ತುಳಿತ ದುರಂತ ರಾಜಕೀಯ ಸ್ವರೂಪ ಪಡೆದಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಇದೇ ವೇಳೆ, ಆರ್ ಸಿಬಿ ತಂಡದ ಸನ್ಮಾನ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದ ಡಿಸಿಎಂ ಡಿಕೆ ಶಿವಕುಮಾರ್, ದುರಂತದ ಹೊಣೆ ಹೊರಲು ಸರ್ಕಾರ ಸಿದ್ಧ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, "ಇದು ರಾಜಕೀಯ ಮಾಡುವ ಸಮಯವಲ್ಲ. ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರ ಜೊತೆಗೆ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದರು. ಬಿಜೆಪಿ ಅವಧಿಯಲ್ಲಿ ಏನೆಲ್ಲಾ ಆಯ್ತು ಎಂದು ಚರ್ಚೆ ಮಾಡೋಕೆ ಹೋಗಲ್ಲ. ಬಿಜೆಪಿ ಹಾಗೂ ಜೆಡಿಎಸ್ ಯಾವತ್ತೂ ಹೆಣದ ಮೇಲೆ ರಾಜಕೀಯ ನಡೆಸಿದೆ. ನಾನು ಹಾಗೆ ಮಾಡುವುದಿಲ್ಲ. ಇದು ನಮ್ಮ ರಾಜ್ಯ ಮತ್ತು ಬೆಂಗಳೂರು ನಗರದ ವರ್ಚಸ್ಸಿನ ಪ್ರಶ್ನೆ. ನಾವು ಇದಕ್ಕೆ ಹೊಣೆ ಹೊತ್ತುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ನಾವು ಹೀಗಾಗಲಿದೆ ಎಂಬ ನಿರೀಕ್ಷೆ ಮಾಡಿರಲಿಲ್ಲ. ಜನರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಮೆಟ್ರೋ ಸಂಚಾರ ನಿಲ್ಲಿಸಿದ್ದೆವು. ಆದರೂ ಅಪಾರ ಜನಸ್ತೋಮವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಸರ್ಕಾರ ಈ ಕಾಲ್ತುಳಿತದ ದುರಂತ ಹೊರಲು ಸಿದ್ಧ ಎಂದು ಡಿಕೆ ಶಿವಕುಮಾರ್ ಹೇಳಿದರು. ಇದು ನಮ್ಮ ಕುಟುಂಬಕ್ಕೆ ಆದ ನೋವು. ಈ ನೋವನ್ನು ತಡೆದುಕೊಳ್ಳಲು ಯಾರಿಂದಲು ಸಾಧ್ಯವಿಲ್ಲ. ನಾನು ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಮಕ್ಕಳ ಸ್ಥಿತಿ ನೋಡಿ ನನಗೆ ಬೇಸರ ಆಗಿದೆ ಎಂದು ಭಾವುಕರಾದರು.
ಪೊಲೀಸ್ ಕಮಿಷನರ್ ನನ್ನ ಬಳಿ ಬಂದು ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿದ್ದು ಕಾರ್ಯಕ್ರಮ ಬೇಗ ಮುಗಿಸುವಂತೆ ಹೇಳಿದರು. ನಾನು ಕೂಡಲೇ ಕೆಸಿಎ ಆಡಳಿತ ಮಂಡಳಿಗೆ ಸೂಚನೆ ನೀಡಿ, ಕಾರ್ಯಕ್ರಮ ನಿಲ್ಲಿಸಿದೆ. ಅವರೂ ತಡ ಮಾಡದೇ ವಿಜಯೋತ್ಸವ ಕಾರ್ಯಕ್ರಮ ನಿಲ್ಲಿಸಿದರು. ಕಾಲ್ತುಳಿತ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡುತ್ತಿದ್ದಂತೆ, ಕ್ರೀಡಾಂಗಣದಲ್ಲಿ ಯಾರಿಗೂ ಮಾತನಾಡಲು ಅವಕಾಶ ಕೊಡಲಿಲ್ಲ. ಇಲ್ಲಿ ಯಾವುದೇ ಆರೋಪ, ಪ್ರತ್ಯಾರೋಪ ಮಾಡುವುದು ಬೇಡ. ಇದಕ್ಕೆಲ್ಲ ಸಂದರ್ಭ ಇದಲ್ಲ ಎಂದರು.
Bengaluru's Prestige at Stake, We Took Responsibility, Stopped Event as Commissioner Advised, DCM DK Shivakumar
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm