ಬ್ರೇಕಿಂಗ್ ನ್ಯೂಸ್
05-06-25 09:27 pm HK News Desk ಕರ್ನಾಟಕ
ಶಿವಮೊಗ್ಗ, ಜೂನ್ 5 : ಭದ್ರತಾ ವೈಫಲ್ಯದಿಂದ, ಈ ಕೆಟ್ಟ ಸರ್ಕಾರ ಮಾಡಿರುವ ಅಪಚಾರದಿಂದ 11 ಜನ ಮೃತಪಟ್ಟಿದ್ದಾರೆ. ಮೊನ್ನೆ ದಿನ ಕಪ್ಪು ಗೆದ್ದಾಗಲೇ ಉನ್ಮಾದದ ಸ್ಥಿತಿಗೆ ಜನ ಬಂದಿದ್ದರು. ನಿನ್ನೆ ಸಿಎಂ, ಡಿಸಿಎಂ ಇದನ್ನ ಸಮರ್ಥನೆ ಮಾಡಿಕೊಳ್ಳುತ್ತಿದ್ದರು. ಇಡೀ ಕನ್ನಡ ನಾಡು ತಲೆತಗ್ಗಿಸುವ ಸ್ಥಿತಿಯಾಗಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಿಎಂ, ಗೃಹ ಸಚಿವ, ಡಿಸಿಎಂ ಪೊಲೀಸ್ ಅಧಿಕಾರಿಗಳನ್ನ ಕೂರಿಸಿ ಬಂದೋಬಸ್ತ್ ವ್ಯವಸ್ಥೆ ಕೇಳುವ ಯೋಗ್ಯತೆ ಇವರಿಗಿಲ್ಲ. ನಾನು ಕೂಡ ರಾಜ್ಯದಲ್ಲಿ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ಪುನೀತ್ ರಾಜ್ ಕುಮಾರ್ ಸತ್ತಾಗ ನಾನು ಸಾಗರದಲ್ಲಿದ್ದೆ. ಊಟ, ತಿಂಡಿ ಬಿಟ್ಟು ಬೆಂಗಳೂರಿಗೆ ಧಾವಿಸಿದ್ದೆ. ಬೆಂಗಳೂರಿಗೆ ಹೋಗುವರೆಗೆ ನಾನು ಅಧಿಕಾರಿಗಳ ಸಭೆ ನಡೆಸುತ್ತಿದ್ದೆ. ಕೇವಲ ಎರಡು ಗಂಟೆಯಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದೆ.
ಅತಿ ದೊಡ್ಡ ಪೊಲೀಸ್ ವ್ಯವಸ್ಥೆ ಬೆಂಗಳೂರಿನಲ್ಲಿದೆ. ಹರಿಬಿರಿಯಲ್ಲಿ ಕ್ರೀಡಾಪಟುಗಳಿಗೆ ಸನ್ಮಾನ ಮಾಡಿದ್ದಾರೆ. ಆ ದೃಶ್ಯವೇ ಆತಂಕ ಸೃಷ್ಟಿಸುತ್ತಿತ್ತು. ವೇದಿಕೆಯಲ್ಲಿ ಸಾವಿರಾರು ಜನ ಇದ್ರು, ಸನ್ಮಾನ ಮಾಡಿದ್ರೋ ಅವಮಾನ ಮಾಡಿದ್ರೋ ಗೊತ್ತಾಗಲಿಲ್ಲ. ಮಕ್ಕಳು, ಮೊಮ್ಮಕ್ಕಳು, ಹೆಂಡತಿಯರನ್ನ ಕರೆದುಕೊಂಡು ಬಂದು ಸೆಲ್ಪಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಮಂತ್ರಿಗಳ ಮನೆಯಲ್ಲಿ ಸತ್ತಿದ್ದರೆ ಇವರಿಗೆ ಅರ್ಥ ಆಗುತ್ತಿತ್ತು. ಯಾರೋ ಡಿಸಿ ನೇತೃತ್ವದಲ್ಲಿ ತನಿಖೆ ಮಾಡಿಸುತ್ತೇವೆ ಎನ್ನುತ್ತಾರೆ. ಹತ್ತು ಲಕ್ಷ ಕೊಟ್ಟಿದ್ದೇವೆ ಎನ್ನುತ್ತಾರೆ, ನಿಮ್ಮ ಯೋಗ್ಯತೆಗೆ ಹಣದಿಂದ ಜನರ ಸಾವನ್ನ ಅಳೆಯಬೇಡಿ. ಸಿಎಂ ಮತ್ತು ಡಿಸಿಎಂ ಅವರು ಆಗಿರುವ ಪ್ರಮಾದಕ್ಕೆ ರಾಜ್ಯದ ಜನರ ಕ್ಷೇಮೆ ಕೇಳಬೇಕಿತ್ತು.
ಪುನೀತ್ ರಾಜ್ ಕುಮಾರ್ ಸತ್ತಾಗ ರಾತ್ರಿ, ಹಗಲು ಶವದ ಬಳಿ ಇದ್ದು ಬಂದೋಬಸ್ತ್ ಮಾಡಿದ್ದೆವು. ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡಲಿಲ್ಲ ಇವರು. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸತ್ತು ಮಲಗಿದೆ. ಅಸಮರ್ಪಕ ಮಾರ್ಗದರ್ಶಕ ಆಡಳಿತ ಇದ್ದರೆ ಏನ್ ಆಗುತ್ತೆ ಅನ್ನೋದೆ ನಿನ್ನೆಯೇ ಘಟನೆ ಉದಾಹರಣೆ. ಜಾಗತೀಕ ಮಟ್ಟದಲ್ಲಿ ನೋಡಿದಾಗ ನಮ್ಮ ಟೀಂ ಅಲ್ಲ ಅದು. ಹಣಕ್ಕಾಗಿ ನಡೆಯುವ ಆಟ ಅದು, ಕೇವಲ ಒಬ್ಬ ಆಟಗಾರ ಮಾತ್ರ ಕನ್ನಡಿಗ ಇದ್ರು ಅಷ್ಟೇ. ಆಪರೇಷನ್ ಸಿಂಧೂರದಲ್ಲಿ ಜನರು ಈ ರೀತಿ ಬೆಂಬಲ ಕೊಟ್ಟಿದ್ದರೆ ಆರ್ಮಿಗೆ ಮತ್ತಷ್ಟು ಬೆಂಬಲ ಸಿಗುತ್ತಿತ್ತು. ಬೆಳಗ್ಗೆಯಿಂದ ನೋಡುತ್ತಿದ್ದೇನೆ ಗೃಹ ಸಚಿವರು ಎಲ್ಲಿ ಹೋಗಿದ್ದಾರೆ ಗೊತ್ತಿಲ್ಲ. ಅಸಮರ್ಥ ಗೃಹ ಸಚಿವರು, ರಾಜಕೀಯವಾಗಿ ಅವರನ್ನ ಹಿಂದೆ ಇಟ್ಟಿದ್ದಾರೆ ಅನಿಸುತ್ತಿದೆ.
ಪೆಹಲ್ಗಾಮ್ ಘಟನೆ ಬಗ್ಗೆ ಭದ್ರತಾ ಲೋಪ ಎಂದರು, ಇದು ಏನು ಅಂತ ಇವರೇ ಹೇಳಬೇಕು. ವಿಧಾನಸೌಧ ಬಳಿ ಅರೆಬರೆಯಾಗಿ ಸನ್ಮಾನ ಮಾಡುವ ಅಗತ್ಯತೆ ಏನಿತ್ತು. ಜನರ ಭಾವನೆಯನ್ನ ರಾಜಕೀಯವಾಗಿ ಬಳಸಿಕೊಳ್ಳುವ ತಂತ್ರ ಇದು. ಇಡೀ ಕನ್ನಡ ನಾಡು ತಲೆ ತಗ್ಗಿಸುವ ಕೆಲಸ ಈ ರಾಜ್ಯದಲ್ಲಿ ನಡೆದಿದೆ. ಗೃಹ ಸಚಿವರು ಒಂದೇ ಒಂದು ಮಾತಾಡಿಲ್ಲ. ಪೊಲೀಸ್ ಇಲಾಖೆಯವರು ಸಹ ನಡೆದುಕೊಂಡ ರೀತಿ ಸರಿ ಇರಲಿಲ್ಲ. ಪೊಲೀಸ್ ಇಲಾಖೆಯ ಅಧಿಕಾರಿಗಳು ಸಹ ಸೆಲ್ಫಿ ತೆಗೆದುಕೊಳ್ಳಲು ನೂಕು ನುಗ್ಗಲಿನಲ್ಲಿದ್ದರು. ಸರ್ಕಾರದ ನಡವಳಿಕೆಯನ್ನು ನಾನು ಖಂಡಿಸುತ್ತೇನೆ. ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು.
ಕರ್ನಾಟಕ ರಾಜ್ಯದಲ್ಲಿ ನಡೆಯಬಾರದ ಘಟನೆ ನಡೆದಿದೆ. ಸರ್ಕಾರದ ವೈಫಲ್ಯ ಎಲ್ಲಾ ಜನರ ಕಣ್ಣಲ್ಲಿ ನೀರು ತರಿಸಿದೆ. ನಮ್ಮ ನಾಯಕರು ಅಸ್ಪತ್ರೆಗೆ ಹೋಗಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಸರ್ಕಾರ ತನಿಖೆಗೆ ಕೊಟ್ಟು ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವಂತಾಗಿತ್ತು. ಡಿ.ಕೆ. ಶಿವಕುಮಾರ್ ಆಟಗಾರರನ್ನು ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ರು. ಅದೊಂದು ಬಾಕಿ ಉಳಿಸಿಕೊಂಡ್ರು ಡಿ.ಕೆ. ಶಿವಕುಮಾರ್ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
Araga Jnanendra Slams Government Over Security Lapse in Stampede Tragedy, Demands Apology from CM and DCM.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm