ಬ್ರೇಕಿಂಗ್ ನ್ಯೂಸ್
05-06-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಕಾಲ್ತುಳಿತ ಪ್ರಕರಣ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯ ಬಳಿಕ ತುರ್ತು ಸುದ್ದಿಗೋಷ್ಠಿ ನಡೆಸಿದ್ದು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್ ಅವರನ್ನು ಅಮಾನತು ಮಾಡಿದ್ದಾಗಿ ಮಾಹಿತಿ ನೀಡಿದ್ದಾರೆ.
ಕಾಲ್ತುಳಿತ ಘಟನೆಯಲ್ಲಿ ಪೊಲೀಸ್ ಇಲಾಖೆ ಸೇರಿ ಮೂರು ಸಂಸ್ಥೆಗಳ ಬೇಜವಾಬ್ದಾರಿ ಕಂಡುಬಂದಿದೆ. ಎಫ್ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ , ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್ಪಾರ್ಕ್ ಇನ್ಸ್ಪೆಕ್ಟರ್ ಗಿರೀಶ್ ಎ.ಕೆ ಅವರನ್ನು ಅಮಾನತು ಮಾಡಲಾಗಿದೆ.






ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನ ಸಿಐಡಿಗೆ ವಹಿಸಿದ್ದೇವೆ. ಮೃತಪಟ್ಟವರ ಕುಟುಂಬಗಳ ಜೊತೆಗೆ ನಮ್ಮ ಸರ್ಕಾರ ಇರಲಿದೆ. ಎಫ್ಐಆರ್ ಆಧಾರದ ಮೇಲೆ ಸಿಐಡಿ ತನಿಖೆ ನಡೆಸಲಿದೆ. 30 ದಿನದಲ್ಲಿ ನ್ಯಾಯಾಂಗ ತನಿಖೆ ಮುಗಿಸಲು ಸೂಚಿಸಿದ್ದು ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಲಾಗಿದೆ. ಗುಪ್ತಚರ ಸಂಸ್ಥೆಯ ವೈಫಲ್ಯವೂ ಆಗಿದೆ ಎಂದು ಒಪ್ಪಿಕೊಂಡರು.
ಪ್ರಕರಣದಲ್ಲಿ ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಹೇಳಿದ್ದಾರೆ.
In the wake of the tragic stampede incident during the Royal Challengers Bangalore (RCB) event in Bengaluru, the Karnataka government has taken swift action by suspending Bengaluru City Police Commissioner B. Dayanand. The incident, which occurred amid overwhelming crowd mismanagement, led to multiple injuries and has sparked widespread criticism over the lack of adequate security measures
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm