ಬ್ರೇಕಿಂಗ್ ನ್ಯೂಸ್
06-06-25 05:32 pm Bengaluru Staff ಕರ್ನಾಟಕ
ಬೆಂಗಳೂರು, ಜೂನ್ 6: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಆದೇಶದ ಮೇರೆಗೆ ಪೊಲೀಸರು ಬಂಧನ ಪ್ರಕ್ರಿಯೆಗೆ ಮುಂದಾಗುತ್ತಿದ್ದಂತೆ, ಕೆಎಸ್ ಸಿಎ ಹೈಕೋರ್ಟ್ ಮೆಟ್ಟಿಲೇರಿದೆ. ಅಲ್ಲದೆ, ರಾಜ್ಯ ಸರ್ಕಾರದ ವಿರುದ್ಧವೇ ಆರೋಪಗಳನ್ನು ಮಾಡಿದೆ. ವಿಧಾನಸೌಧ ಮುಂದೆ ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡಲು ಹೇಳಿದ್ದೇ ರಾಜ್ಯ ಸರ್ಕಾರ ಎಂದು ಗಂಭೀರ ಆರೋಪ ಮಾಡಿದೆ. ಇದೇ ವೇಳೆ, ಆರ್ ಸಿಬಿ ಮಾರ್ಕೆಟಿಂಗ್ ಮ್ಯಾನೇಜರ್ ಪತ್ನಿಯೂ ಕೋರ್ಟ್ ಮೆಟ್ಟಿಲೇರಿದ್ದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.
ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರನ್ನ ಇಂದು ಬೆಳಗ್ಗೆ ಬೆಂಗಳೂರು ಏರ್ಪೋರ್ಟ್ ನಲ್ಲಿ ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ನಿಖಿಲ್ ಸೋಸಲೆ ಅವರ ಪತ್ನಿ ಮಾಳವಿಕಾ ನಾಯ್ಕ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಬಂಧನಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ. ಸಿಎಂ ಆದೇಶದಂತೆ, ತಮ್ಮ ಪತಿಯನ್ನ ಯಾವುದೇ ವಿಚಾರಣೆ, ನೋಟಿಸ್ ಮಾಡದೆ ಕಾನೂನುಬಾಹಿರವಾಗಿ ಬಂಧನ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಮುಂದಿಟ್ಟು ರಿಟ್ ಅರ್ಜಿ ಸಲ್ಲಿಸಿದ್ದಾರೆ. ತನಿಖೆಯನ್ನೇ ನಡೆಸದೇ ಬಂಧಿಸಲಾಗಿದೆ. ಕಾನೂನು, ಸಂವಿಧಾನ ಕಡೆಗಣಿಸಿ ಬಂಧನ ಮಾಡಲಾಗಿದ್ದು, ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ, ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಸರ್ಕಾರದ ಪ್ರತಿನಿಧಿ ಡಿಸಿಎಂ ಕೂಡ ಭಾಗಿಯಾಗಿದ್ದರು. ಸರ್ಕಾರದ ಕಡೆಯಿಂದಲೇ ಆಯೋಜನೆ ಮಾಡಿದ್ದ ಕಾರ್ಯಕ್ರಮದ ನೆಪದಲ್ಲಿ ತನ್ನ ಪತಿಯನ್ನು ಬಂಧಿಸಲಾಗಿದೆ ಎಂದು ಆಕ್ಷೇಪ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ಆನ್ಲೈನ್ ಮೂಲಕ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿತ್ತು. ಪಾಸ್ ಇದ್ದವರಿಗಷ್ಟೇ ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರವೇಶ ಎಂದು ತಿಳಿಸಲಾಗಿತ್ತು. ಆರ್ ಸಿಬಿ ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಖುದ್ದು ಡಿಸಿಎಂ ಸ್ವಾಗತಿಸಿದ್ದರು. ವಿಧಾನಸೌಧ ಮುಂಭಾಗದಲ್ಲಿ ಸರ್ಕಾರದ್ದೇ ಕಾರ್ಯಕ್ರಮ ಆಯೋಜಿಸಿ, ಸಿಎಂ, ಡಿಸಿಎಂ ಸನ್ಮಾನಿಸಿದ್ದರು. ಅವಘಡ ಮಾಹಿತಿ ತಿಳಿದ ತಕ್ಷಣ ಆರ್ಸಿಬಿಯಿಂದ ಕಾರ್ಯಕ್ರಮ ಸ್ಥಗಿತ ಮಾಡಲಾಗಿತ್ತು. ಹೀಗಾಗಿ ಆರ್ ಸಿಬಿ ಕಡೆಯಿಂದ ಯಾವುದೇ ಲೋಪವೆಸಗಿಲ್ಲ. ಹೀಗಾಗಿ ನಿಖಿಲ್ ಸೋಸಲೆ ಬಂಧನಕ್ಕೆ ತಡೆ ನೀಡುವಂತೆ ಪತ್ನಿ ಮಾಳವಿಕಾ ನಾಯ್ಕ್ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಇದೇ ವೇಳೆ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕೂಡ ರಾಜ್ಯ ಸರ್ಕಾರದ ನಡೆಯ ವಿರುದ್ಧ ಹೈಕೋರ್ಟ್ ಗೆ ಮೆಟ್ಟಿಲೇರಿದೆ. ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಸೂಚನೆ ಕೊಟ್ಟಿದ್ದೇ ಸರ್ಕಾರ ಎಂದು ರಿಟ್ ಅರ್ಜಿಯಲ್ಲಿ ಆರೋಪಿಸಿದ್ದು ಈ ಕುರಿತ ದಾಖಲೆಯನ್ನೂ ಒದಗಿಸಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಮುಂಭಾಗದಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರದ ಕಡೆಯಿಂದಲೇ ಆಯೋಜನೆ ಆಗಿದ್ದರೂ ಜನರ ಆಕ್ರೋಶದ ಹಾದಿ ತಪ್ಪಿಸಲು ತಮ್ಮ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಈ ಮೂಲಕ ಒಟ್ಟು ಪ್ರಕರಣ ರಾಜ್ಯ ಸರ್ಕಾರಕ್ಕೆ ತಿರುಗುಬಾಣವಾಗುತ್ತಾ ಎನ್ನುವ ಜಿಜ್ಞಾಸೆ ಮೂಡಿದೆ. ಮತ್ತೊಂದೆಡೆ, ಹೈಕೋರ್ಟ್ ಕೂಡ ಕಾಲ್ತುಳಿತ ಘಟನೆ ಸಂಬಂಧಿಸಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು ಸರ್ಕಾರಕ್ಕೆ ನೋಟಿಸ್ ಮಾಡಿದೆ.
The controversy surrounding the recent RCB victory celebration has intensified, with the Karnataka State Cricket Association (KSCA) and the wife of Royal Challengers Bengaluru’s marketing manager approaching the High Court against the state government and police action.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm