ಬ್ರೇಕಿಂಗ್ ನ್ಯೂಸ್
06-06-25 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6 : ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನ ಅಮಾನತುಗೊಳಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ಕೇಳಿಬರುತ್ತಿದ್ದರೆ, ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿ ರಾಜ್ಯದ ಗಮನ ಸೆಳೆದಿದ್ದಾರೆ.
ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಸರ್ಕಾರ ವಿನಾಕಾರಣ ಅಮಾನತು ಶಿಕ್ಷೆ ನೀಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಇವೆಲ್ಲದರ ಮಧ್ಯೆ ಪೊಲೀಸ್ ಇಲಾಖೆಯದ್ದೇ ಸಿಬ್ಬಂದಿ ನರಸಿಂಹರಾಜು, ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರದ ಕ್ರಮ ಕೈಗೊಂಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಪೊಲೀಸ್ ವಶವಾಗಿದ್ದಾರೆ.

ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಸರ್ಕಾರದ ನಡೆಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಕೈಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಆಮೂಲಕ ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಆಗ್ರಹ ಮಾಡಿದ್ದಾರೆ. ಅವರನ್ನು ಕೂಡಲೇ ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದು ನೂಕುನುಗ್ಗಲು ಉಂಟಾಗಿ ದುರಂತ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದರು.
Police Constable Protests Against Suspension of Commissioner Dayanand; Wears Black Band, Demonstrates Outside Raj Bhavan.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm