ಬ್ರೇಕಿಂಗ್ ನ್ಯೂಸ್
07-06-25 06:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7 : ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ಆರ್ ಸಿಬಿ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು. ಇದಕ್ಕಾಗಿ ಅಧಿಕಾರ ದುರುಪಯೋಗ ಮಾಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ಗೃಹ ಸಚಿವ ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ಆರೋಪಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊರ ಬೇಕಾಗುತ್ತದೆ ಎಂದು ಹೇಳಿದರು. ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಆರ್ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿತ್ತು. ಸರ್ಕಾರಕ್ಕೂ ಆರ್ಸಿಬಿಗೂ ಏನು ಸಂಬಂಧ? ಆರ್ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.
BJP Files Police Complaint Against CM Siddaramaiah, DCM Shivakumar, and Home Minister Over RCB Victory Stampede Incident.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm