ಬ್ರೇಕಿಂಗ್ ನ್ಯೂಸ್
07-06-25 06:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7 : ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ಆರ್ ಸಿಬಿ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು. ಇದಕ್ಕಾಗಿ ಅಧಿಕಾರ ದುರುಪಯೋಗ ಮಾಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ಗೃಹ ಸಚಿವ ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ಆರೋಪಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊರ ಬೇಕಾಗುತ್ತದೆ ಎಂದು ಹೇಳಿದರು. ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಆರ್ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿತ್ತು. ಸರ್ಕಾರಕ್ಕೂ ಆರ್ಸಿಬಿಗೂ ಏನು ಸಂಬಂಧ? ಆರ್ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.
BJP Files Police Complaint Against CM Siddaramaiah, DCM Shivakumar, and Home Minister Over RCB Victory Stampede Incident.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm