ಬ್ರೇಕಿಂಗ್ ನ್ಯೂಸ್
07-06-25 06:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7 : ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ಆರ್ ಸಿಬಿ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು. ಇದಕ್ಕಾಗಿ ಅಧಿಕಾರ ದುರುಪಯೋಗ ಮಾಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ಗೃಹ ಸಚಿವ ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ಆರೋಪಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊರ ಬೇಕಾಗುತ್ತದೆ ಎಂದು ಹೇಳಿದರು. ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಆರ್ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿತ್ತು. ಸರ್ಕಾರಕ್ಕೂ ಆರ್ಸಿಬಿಗೂ ಏನು ಸಂಬಂಧ? ಆರ್ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.
BJP Files Police Complaint Against CM Siddaramaiah, DCM Shivakumar, and Home Minister Over RCB Victory Stampede Incident.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm