ಬ್ರೇಕಿಂಗ್ ನ್ಯೂಸ್
07-06-25 06:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7 : ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ಆರ್ ಸಿಬಿ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು. ಇದಕ್ಕಾಗಿ ಅಧಿಕಾರ ದುರುಪಯೋಗ ಮಾಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ಗೃಹ ಸಚಿವ ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ಆರೋಪಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊರ ಬೇಕಾಗುತ್ತದೆ ಎಂದು ಹೇಳಿದರು. ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಆರ್ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿತ್ತು. ಸರ್ಕಾರಕ್ಕೂ ಆರ್ಸಿಬಿಗೂ ಏನು ಸಂಬಂಧ? ಆರ್ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.
BJP Files Police Complaint Against CM Siddaramaiah, DCM Shivakumar, and Home Minister Over RCB Victory Stampede Incident.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am