ಬ್ರೇಕಿಂಗ್ ನ್ಯೂಸ್
07-06-25 06:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7 : ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ಆರ್ ಸಿಬಿ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು. ಇದಕ್ಕಾಗಿ ಅಧಿಕಾರ ದುರುಪಯೋಗ ಮಾಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ಗೃಹ ಸಚಿವ ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ಆರೋಪಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊರ ಬೇಕಾಗುತ್ತದೆ ಎಂದು ಹೇಳಿದರು. ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಆರ್ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿತ್ತು. ಸರ್ಕಾರಕ್ಕೂ ಆರ್ಸಿಬಿಗೂ ಏನು ಸಂಬಂಧ? ಆರ್ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.
BJP Files Police Complaint Against CM Siddaramaiah, DCM Shivakumar, and Home Minister Over RCB Victory Stampede Incident.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm