ಬ್ರೇಕಿಂಗ್ ನ್ಯೂಸ್
07-06-25 06:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7 : ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ಆರ್ ಸಿಬಿ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು. ಇದಕ್ಕಾಗಿ ಅಧಿಕಾರ ದುರುಪಯೋಗ ಮಾಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ಗೃಹ ಸಚಿವ ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ಆರೋಪಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊರ ಬೇಕಾಗುತ್ತದೆ ಎಂದು ಹೇಳಿದರು. ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಆರ್ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿತ್ತು. ಸರ್ಕಾರಕ್ಕೂ ಆರ್ಸಿಬಿಗೂ ಏನು ಸಂಬಂಧ? ಆರ್ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.
BJP Files Police Complaint Against CM Siddaramaiah, DCM Shivakumar, and Home Minister Over RCB Victory Stampede Incident.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am