ಬ್ರೇಕಿಂಗ್ ನ್ಯೂಸ್
09-06-25 02:00 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 9 : ಮಂಗಳೂರು ಎಸ್ಪಿ ಮನಬಂದಂತೆ ವರ್ತಿಸುತ್ತಿದ್ದಾರೆ. ಈ ಅಟಿಟ್ಯೂಡ್ ನಡೆಯಲ್ಲ.. ಮುಂದೆ ನಮ್ಮ ಸರ್ಕಾರ ಬರುತ್ತದೆ. ಕಾಂಗ್ರೆಸ್ ವರ್ಕರ್ ರೀತಿ ವರ್ತಿಸೋದನ್ನು ಮೊದಲು ನಿಲ್ಲಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಕಿಡಿಕಾರಿದ್ದಾರೆ.
ನಾನು ಅಲ್ಲಿಗೆ ಬರ್ತೇನೆ, ಎಷ್ಟು ಜನರ ಮೇಲೆ ಕೇಸ್ ಹಾಕ್ತೀರೋ ಹಾಕಿ. ಕಾನೂನು ಬಿಟ್ಟು ಕೆಲಸ ಮಾಡಬೇಡಿ. ಹೊಸ ಎಸ್ಪಿ ಬಹಳ ಡ್ರಾಮ ಮಾಡ್ತಿದ್ದಾರೆ ಎಂದು ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕ್ತಿರೋದು, ಗಡೀಪಾರು ಮಾಡ್ತಿರೋದಕ್ಕೆ ಸಚಿವ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಹಾಸ್ ಹತ್ಯೆ ಭಯೋತ್ಪಾದನೆ ಕೃತ್ಯವಿದೆ, ಹೀಗಾಗಿ ಎನ್ ಐ ಎ ಗೆ ನೀಡಲಾಗಿದೆ. ಕಾಂಗ್ರೆಸ್ ಪಾಕಿಸ್ತಾನ ಭಾಷೆಯನ್ನು ಬಳಸುತ್ತದೆ. ಹಾಗಾಗಿ ಯಾಕೆ ಎನ್ಐಎ ಅಂತ ಕೇಳುತ್ತೆ. ಅವರಿಗೆ ಅರ್ಥವಾಗಲ್ಲ. ಓಟಿಗಾಗಿ ದೇಶವನ್ನು ಮಾರಲು ಹಿಂದೇಟು ಹಾಕಲ್ಲಾ ಕಾಂಗ್ರೆಸ್. ಕಾಂಗ್ರೆಸ್ ಮಾನಸಿಕತೆಯೇ ಹಾಗಿದೆ, ಹೀಗಾಗಿ ಅವರು ಈ ರೀತಿ ಮಾತನಾಡುತ್ತಾರೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
ಕಾಲ್ತುಳಿತ ಘಟನೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಡಿಸಿಎಂ ಶಿವಕುಮಾರ್ ಮನೆಗೆ ಹೋಗಬೇಕು ಎಂಬುದು ನಮ್ಮದು ಮೊದಲ ಡಿಮ್ಯಾಂಡ್. ಕಮಿಷನರ್ ದಯಾನಂದ್ ಅವರು ಮಕ್ಕಳು ಸತ್ತಿದ್ದನ್ನು ನಮಗೆ ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಹೇಳ್ತಿದ್ದಾರೆ. ಇವರಿಗೆ ನಾಚಿಕೆ ಆಗಬೇಕು, ಯೋಗ್ಯತೆ ಇದೆಯಾ ಆಡಳಿತ ನಡೆಸೋದಕ್ಕೆ ಅಂತ ಪ್ರಶ್ನೆ ಮಾಡಿದ್ದಾರೆ. ನಿಂಬಾಳ್ಕರ್ ನಿಮ್ಮದೇ ಅಧಿಕಾರಿ, ಗುಪ್ತಚರ ಮುಖ್ಯಸ್ಥರಾಗಿ ಏನ್ ಮಾಡ್ತಾ ಇದ್ದರು. ನಿಂಬಾಳ್ಕರ್ ನಿಮ್ಮ ಪಕ್ಷದ ಕಾರ್ಯಕರ್ತ, ಅವರನ್ನ ಏಕೆ ಅಮಾನತು ಮಾಡಿಲ್ಲ. ಕೇವಲ ವರ್ಗಾವಣೆ ಮಾಡಿದ್ದಾರೆ.
ಸಿದ್ದರಾಮಯ್ಯನವರ ಸರ್ಕಾರದಲ್ಲಿ ಬೇಕಾದವರಿಗೆ ಬೆಣ್ಣೆ, ಬೇಡವಾದವರಿಗೆ ಸುಣ್ಣ. "ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ" ಎಂದು ಶಹರಿ ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಆರ್ಸಿಬಿ ದೇಶ ಹಾಗೂ ರಾಜ್ಯದ ಟೀಮ್ ಅಲ್ಲ. ಕಾಲ್ತುಳಿತ ಘಟನೆ ನಡೆದಾಗ ಮಕ್ಕಳು, ಮೊಮ್ಮಕ್ಕಳು ಜೊತೆಗೆ ಸೆಲ್ಪಿ ತೆಗೆದುಕೊಳ್ಳಲು ಇವರೆಲ್ಲರೂ ಬ್ಯೂಜಿ ಆಗಿದ್ದರು. ಪೊಲೀಸ್ ಆಯುಕ್ತರು ಕಾರ್ಯಕ್ರಮ ಬೇಡ ಎಂದ್ರೂ ಏಕೆ ಮಾಡಿದ್ರು ಎಂಬುದನ್ನ ಸ್ಪಷ್ಟಪಡಿಸಬೇಕು.
ಐರಾವಣನರು, ಬೈರಾವಣವರು ಗೃಹಲಕ್ಷ್ಮಿ ಪ್ರತಿ ತಿಂಗಳು ಕೊಡುತ್ತೇನೆಂದು ಹೇಳಿದ್ದರು, ಈಗ ನಾವು ಕೊಡುತ್ತೇವೆಂದು ಹೇಳಿಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಮೂರ್ಖರಂತೆ ಮಾತನಾಡುತ್ತಿದ್ದಾರೆ. ಕುಂಭ ಮೇಳದ ಘಟನೆಗೆ, ಈ ಪ್ರಕರಣವನ್ನ ಹೋಲಿಸಿಕೊಳ್ಳುತ್ತಾರೆ. ನಾಚಿಕೆ, ಮಾನ ಮರ್ಯಾದೆ ಇದೆಯಾ ನಿಮಗೆ, ದಪ್ಪ ಚರ್ಮದವರಿಗೆ ಯಾವುದೇ ಮುಜುಗರ ಆಗುವುದಿಲ್ಲ ಎಂದು ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದರು.
Union Minister Prahlad Joshi has sharply criticized the Mangaluru Superintendent of Police (SP), accusing him of behaving in a highly “dramatic” manner. Joshi urged the SP to stop acting like a Congress party worker, warning that such behavior is unacceptable and must end immediately.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm