ಬ್ರೇಕಿಂಗ್ ನ್ಯೂಸ್
09-06-25 04:41 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 09: ಎರಡನೇ ಮದುವೆಗೆ ಹಸೆಮಣೆಗೆ ಏರಲು ಸಿದ್ಧವಾಗಿದ್ದ ಪತಿಗೆ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ರೂಪನಗರ ಗ್ರಾಮದ ಕಾರ್ತಿಕ್ ನಾಯ್ಕ ಎರಡನೇ ಮದುವೆಗೆ ಮುಂದಾಗಿದ್ದ ಆರೋಪಿ.
ಆರೋಪಿ ಕಾರ್ತಿಕ್ ನಾಯ್ಕ ಎರಡನೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರ್ತಿಕ್ ನಾಯ್ಕ್, ಪೋಷಕರಾದ ಮಹೇಶ್ ನಾಯ್ಕ್, ವೈಶಾಲಿ ಹಾಗೂ ಸಹೋದರಿ ಮೇಘಶ್ರೀ ಅವರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.



ತನ್ನನ್ನು ಕಾರ್ತಿಕ್ ಮೋಹನ್ ನಾಯ್ಕ್ ಎಂದು ಹೇಳಿಕೊಂಡಿದ್ದ ಆರೋಪಿ, ಪೋಷಕರನ್ನು ಮೋಹನ್ ಮಹೇಶ್ ನಾಯ್ಕ್ ಹಾಗೂ ವಿಶಾಲಾಕ್ಷಿ ಎಂದು ಪರಿಚಯಿಸಿದ್ದ. ಅಲ್ಲದೇ, ಬ್ರೋಕರ್ ಕೂಡ ವಧುವಿನ ಕಡೆಯವರಿಂದ ಎಲ್ಲ ವಿಚಾರಗಳನ್ನೂ ಮುಚ್ಚಿಟ್ಟು, ಹುಡುಗ ತುಂಬಾ ಒಳ್ಳೆಯವನು, ಯಾವುದೇ ದುಶ್ಚಟವಿಲ್ಲ ಎಂದು ನಂಬಿಸಿದ್ದ. ಕಾರ್ತಿಕ್ ಕೂಡ ಯುವತಿಯ ಮನೆಯವರೊಂದಿಗೆ ನಂಬಿಕೆ ಬರುವಂತೆ ಮಾತನಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಮದುವೆಗೂ ಮುನ್ನವೇ ಕಾರ್ತಿಕ್ ಕಡೆಯವರು ಮದುವೆಗೆ ಹಣದ ಅಗತ್ಯತೆ ಇದೆ. ಬಳಿಕ ಮರಳಿಸುತ್ತೇವೆ ಎಂದು ಹೇಳಿ ಯುವತಿ ಕಡೆಯವರಿಂದ ಐದು ಲಕ್ಷ ರೂ. ಸಾಲ ಪಡೆದಿದ್ದರು. ಜೊತೆಗೆ, ಕಲ್ಯಾಣ ಮಂಟಪದ ಖರ್ಚು ಸೇರಿದಂತೆ ಮದುವೆಗೆ ಲಕ್ಷಾಂತರ ರೂ. ವ್ಯಯಿಸಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಮದುವೆ ಸಂದರ್ಭದಲ್ಲಿ ದಾವಣಗೆರೆಯೆ ನ್ಯಾಮತಿಯ ಮೊದಲ ಪತ್ನಿ ಏಕಾಏಕಿ ಮಧ್ಯೆ ಪ್ರವೇಶಿಸಿ ಹೇಳಿದ ಬಳಿಕವೇ ಕಾರ್ತಿಕ್ಗೆ ಈಗಾಗಲೇ 2021ರಲ್ಲೇ ವಿವಾಹವಾಗಿದೆ ಎಂಬ ವಿಚಾರ ಗೊತ್ತಾಯಿತು. ಅಲ್ಲದೇ, ಆತ ತನ್ನ ಹಾಗೂ ಮನೆಯವರ ಹೆಸರು ಬದಲಾಯಿಸಿ ಮೋಸ ಮಾಡಿರುವುದು ಸಹ ಮೊದಲ ಪತ್ನಿಯಿಂದ ತಿಳಿಯಿತು. ಮೊದಲೇ ಮದುವೆಯಾಗಿರುವ ವಿಚಾರವನ್ನು ಮರೆಮಾಚಿ, ನಮ್ಮಿಂದ 5 ಲಕ್ಷ ರೂ. ಪಡೆದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
Drama at Wedding Hall, First Wife Storms Venue, Thrashes Groom Attempting Second Marriage in Chitradurga
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm