ಬ್ರೇಕಿಂಗ್ ನ್ಯೂಸ್
09-06-25 04:41 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 09: ಎರಡನೇ ಮದುವೆಗೆ ಹಸೆಮಣೆಗೆ ಏರಲು ಸಿದ್ಧವಾಗಿದ್ದ ಪತಿಗೆ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ರೂಪನಗರ ಗ್ರಾಮದ ಕಾರ್ತಿಕ್ ನಾಯ್ಕ ಎರಡನೇ ಮದುವೆಗೆ ಮುಂದಾಗಿದ್ದ ಆರೋಪಿ.
ಆರೋಪಿ ಕಾರ್ತಿಕ್ ನಾಯ್ಕ ಎರಡನೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರ್ತಿಕ್ ನಾಯ್ಕ್, ಪೋಷಕರಾದ ಮಹೇಶ್ ನಾಯ್ಕ್, ವೈಶಾಲಿ ಹಾಗೂ ಸಹೋದರಿ ಮೇಘಶ್ರೀ ಅವರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.



ತನ್ನನ್ನು ಕಾರ್ತಿಕ್ ಮೋಹನ್ ನಾಯ್ಕ್ ಎಂದು ಹೇಳಿಕೊಂಡಿದ್ದ ಆರೋಪಿ, ಪೋಷಕರನ್ನು ಮೋಹನ್ ಮಹೇಶ್ ನಾಯ್ಕ್ ಹಾಗೂ ವಿಶಾಲಾಕ್ಷಿ ಎಂದು ಪರಿಚಯಿಸಿದ್ದ. ಅಲ್ಲದೇ, ಬ್ರೋಕರ್ ಕೂಡ ವಧುವಿನ ಕಡೆಯವರಿಂದ ಎಲ್ಲ ವಿಚಾರಗಳನ್ನೂ ಮುಚ್ಚಿಟ್ಟು, ಹುಡುಗ ತುಂಬಾ ಒಳ್ಳೆಯವನು, ಯಾವುದೇ ದುಶ್ಚಟವಿಲ್ಲ ಎಂದು ನಂಬಿಸಿದ್ದ. ಕಾರ್ತಿಕ್ ಕೂಡ ಯುವತಿಯ ಮನೆಯವರೊಂದಿಗೆ ನಂಬಿಕೆ ಬರುವಂತೆ ಮಾತನಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಮದುವೆಗೂ ಮುನ್ನವೇ ಕಾರ್ತಿಕ್ ಕಡೆಯವರು ಮದುವೆಗೆ ಹಣದ ಅಗತ್ಯತೆ ಇದೆ. ಬಳಿಕ ಮರಳಿಸುತ್ತೇವೆ ಎಂದು ಹೇಳಿ ಯುವತಿ ಕಡೆಯವರಿಂದ ಐದು ಲಕ್ಷ ರೂ. ಸಾಲ ಪಡೆದಿದ್ದರು. ಜೊತೆಗೆ, ಕಲ್ಯಾಣ ಮಂಟಪದ ಖರ್ಚು ಸೇರಿದಂತೆ ಮದುವೆಗೆ ಲಕ್ಷಾಂತರ ರೂ. ವ್ಯಯಿಸಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಮದುವೆ ಸಂದರ್ಭದಲ್ಲಿ ದಾವಣಗೆರೆಯೆ ನ್ಯಾಮತಿಯ ಮೊದಲ ಪತ್ನಿ ಏಕಾಏಕಿ ಮಧ್ಯೆ ಪ್ರವೇಶಿಸಿ ಹೇಳಿದ ಬಳಿಕವೇ ಕಾರ್ತಿಕ್ಗೆ ಈಗಾಗಲೇ 2021ರಲ್ಲೇ ವಿವಾಹವಾಗಿದೆ ಎಂಬ ವಿಚಾರ ಗೊತ್ತಾಯಿತು. ಅಲ್ಲದೇ, ಆತ ತನ್ನ ಹಾಗೂ ಮನೆಯವರ ಹೆಸರು ಬದಲಾಯಿಸಿ ಮೋಸ ಮಾಡಿರುವುದು ಸಹ ಮೊದಲ ಪತ್ನಿಯಿಂದ ತಿಳಿಯಿತು. ಮೊದಲೇ ಮದುವೆಯಾಗಿರುವ ವಿಚಾರವನ್ನು ಮರೆಮಾಚಿ, ನಮ್ಮಿಂದ 5 ಲಕ್ಷ ರೂ. ಪಡೆದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
Drama at Wedding Hall, First Wife Storms Venue, Thrashes Groom Attempting Second Marriage in Chitradurga
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm