ಬ್ರೇಕಿಂಗ್ ನ್ಯೂಸ್
09-06-25 04:41 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 09: ಎರಡನೇ ಮದುವೆಗೆ ಹಸೆಮಣೆಗೆ ಏರಲು ಸಿದ್ಧವಾಗಿದ್ದ ಪತಿಗೆ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ರೂಪನಗರ ಗ್ರಾಮದ ಕಾರ್ತಿಕ್ ನಾಯ್ಕ ಎರಡನೇ ಮದುವೆಗೆ ಮುಂದಾಗಿದ್ದ ಆರೋಪಿ.
ಆರೋಪಿ ಕಾರ್ತಿಕ್ ನಾಯ್ಕ ಎರಡನೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರ್ತಿಕ್ ನಾಯ್ಕ್, ಪೋಷಕರಾದ ಮಹೇಶ್ ನಾಯ್ಕ್, ವೈಶಾಲಿ ಹಾಗೂ ಸಹೋದರಿ ಮೇಘಶ್ರೀ ಅವರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.



ತನ್ನನ್ನು ಕಾರ್ತಿಕ್ ಮೋಹನ್ ನಾಯ್ಕ್ ಎಂದು ಹೇಳಿಕೊಂಡಿದ್ದ ಆರೋಪಿ, ಪೋಷಕರನ್ನು ಮೋಹನ್ ಮಹೇಶ್ ನಾಯ್ಕ್ ಹಾಗೂ ವಿಶಾಲಾಕ್ಷಿ ಎಂದು ಪರಿಚಯಿಸಿದ್ದ. ಅಲ್ಲದೇ, ಬ್ರೋಕರ್ ಕೂಡ ವಧುವಿನ ಕಡೆಯವರಿಂದ ಎಲ್ಲ ವಿಚಾರಗಳನ್ನೂ ಮುಚ್ಚಿಟ್ಟು, ಹುಡುಗ ತುಂಬಾ ಒಳ್ಳೆಯವನು, ಯಾವುದೇ ದುಶ್ಚಟವಿಲ್ಲ ಎಂದು ನಂಬಿಸಿದ್ದ. ಕಾರ್ತಿಕ್ ಕೂಡ ಯುವತಿಯ ಮನೆಯವರೊಂದಿಗೆ ನಂಬಿಕೆ ಬರುವಂತೆ ಮಾತನಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಮದುವೆಗೂ ಮುನ್ನವೇ ಕಾರ್ತಿಕ್ ಕಡೆಯವರು ಮದುವೆಗೆ ಹಣದ ಅಗತ್ಯತೆ ಇದೆ. ಬಳಿಕ ಮರಳಿಸುತ್ತೇವೆ ಎಂದು ಹೇಳಿ ಯುವತಿ ಕಡೆಯವರಿಂದ ಐದು ಲಕ್ಷ ರೂ. ಸಾಲ ಪಡೆದಿದ್ದರು. ಜೊತೆಗೆ, ಕಲ್ಯಾಣ ಮಂಟಪದ ಖರ್ಚು ಸೇರಿದಂತೆ ಮದುವೆಗೆ ಲಕ್ಷಾಂತರ ರೂ. ವ್ಯಯಿಸಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಮದುವೆ ಸಂದರ್ಭದಲ್ಲಿ ದಾವಣಗೆರೆಯೆ ನ್ಯಾಮತಿಯ ಮೊದಲ ಪತ್ನಿ ಏಕಾಏಕಿ ಮಧ್ಯೆ ಪ್ರವೇಶಿಸಿ ಹೇಳಿದ ಬಳಿಕವೇ ಕಾರ್ತಿಕ್ಗೆ ಈಗಾಗಲೇ 2021ರಲ್ಲೇ ವಿವಾಹವಾಗಿದೆ ಎಂಬ ವಿಚಾರ ಗೊತ್ತಾಯಿತು. ಅಲ್ಲದೇ, ಆತ ತನ್ನ ಹಾಗೂ ಮನೆಯವರ ಹೆಸರು ಬದಲಾಯಿಸಿ ಮೋಸ ಮಾಡಿರುವುದು ಸಹ ಮೊದಲ ಪತ್ನಿಯಿಂದ ತಿಳಿಯಿತು. ಮೊದಲೇ ಮದುವೆಯಾಗಿರುವ ವಿಚಾರವನ್ನು ಮರೆಮಾಚಿ, ನಮ್ಮಿಂದ 5 ಲಕ್ಷ ರೂ. ಪಡೆದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
Drama at Wedding Hall, First Wife Storms Venue, Thrashes Groom Attempting Second Marriage in Chitradurga
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm