ಬ್ರೇಕಿಂಗ್ ನ್ಯೂಸ್
09-06-25 04:41 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 09: ಎರಡನೇ ಮದುವೆಗೆ ಹಸೆಮಣೆಗೆ ಏರಲು ಸಿದ್ಧವಾಗಿದ್ದ ಪತಿಗೆ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ರೂಪನಗರ ಗ್ರಾಮದ ಕಾರ್ತಿಕ್ ನಾಯ್ಕ ಎರಡನೇ ಮದುವೆಗೆ ಮುಂದಾಗಿದ್ದ ಆರೋಪಿ.
ಆರೋಪಿ ಕಾರ್ತಿಕ್ ನಾಯ್ಕ ಎರಡನೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರ್ತಿಕ್ ನಾಯ್ಕ್, ಪೋಷಕರಾದ ಮಹೇಶ್ ನಾಯ್ಕ್, ವೈಶಾಲಿ ಹಾಗೂ ಸಹೋದರಿ ಮೇಘಶ್ರೀ ಅವರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.



ತನ್ನನ್ನು ಕಾರ್ತಿಕ್ ಮೋಹನ್ ನಾಯ್ಕ್ ಎಂದು ಹೇಳಿಕೊಂಡಿದ್ದ ಆರೋಪಿ, ಪೋಷಕರನ್ನು ಮೋಹನ್ ಮಹೇಶ್ ನಾಯ್ಕ್ ಹಾಗೂ ವಿಶಾಲಾಕ್ಷಿ ಎಂದು ಪರಿಚಯಿಸಿದ್ದ. ಅಲ್ಲದೇ, ಬ್ರೋಕರ್ ಕೂಡ ವಧುವಿನ ಕಡೆಯವರಿಂದ ಎಲ್ಲ ವಿಚಾರಗಳನ್ನೂ ಮುಚ್ಚಿಟ್ಟು, ಹುಡುಗ ತುಂಬಾ ಒಳ್ಳೆಯವನು, ಯಾವುದೇ ದುಶ್ಚಟವಿಲ್ಲ ಎಂದು ನಂಬಿಸಿದ್ದ. ಕಾರ್ತಿಕ್ ಕೂಡ ಯುವತಿಯ ಮನೆಯವರೊಂದಿಗೆ ನಂಬಿಕೆ ಬರುವಂತೆ ಮಾತನಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಮದುವೆಗೂ ಮುನ್ನವೇ ಕಾರ್ತಿಕ್ ಕಡೆಯವರು ಮದುವೆಗೆ ಹಣದ ಅಗತ್ಯತೆ ಇದೆ. ಬಳಿಕ ಮರಳಿಸುತ್ತೇವೆ ಎಂದು ಹೇಳಿ ಯುವತಿ ಕಡೆಯವರಿಂದ ಐದು ಲಕ್ಷ ರೂ. ಸಾಲ ಪಡೆದಿದ್ದರು. ಜೊತೆಗೆ, ಕಲ್ಯಾಣ ಮಂಟಪದ ಖರ್ಚು ಸೇರಿದಂತೆ ಮದುವೆಗೆ ಲಕ್ಷಾಂತರ ರೂ. ವ್ಯಯಿಸಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಮದುವೆ ಸಂದರ್ಭದಲ್ಲಿ ದಾವಣಗೆರೆಯೆ ನ್ಯಾಮತಿಯ ಮೊದಲ ಪತ್ನಿ ಏಕಾಏಕಿ ಮಧ್ಯೆ ಪ್ರವೇಶಿಸಿ ಹೇಳಿದ ಬಳಿಕವೇ ಕಾರ್ತಿಕ್ಗೆ ಈಗಾಗಲೇ 2021ರಲ್ಲೇ ವಿವಾಹವಾಗಿದೆ ಎಂಬ ವಿಚಾರ ಗೊತ್ತಾಯಿತು. ಅಲ್ಲದೇ, ಆತ ತನ್ನ ಹಾಗೂ ಮನೆಯವರ ಹೆಸರು ಬದಲಾಯಿಸಿ ಮೋಸ ಮಾಡಿರುವುದು ಸಹ ಮೊದಲ ಪತ್ನಿಯಿಂದ ತಿಳಿಯಿತು. ಮೊದಲೇ ಮದುವೆಯಾಗಿರುವ ವಿಚಾರವನ್ನು ಮರೆಮಾಚಿ, ನಮ್ಮಿಂದ 5 ಲಕ್ಷ ರೂ. ಪಡೆದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
Drama at Wedding Hall, First Wife Storms Venue, Thrashes Groom Attempting Second Marriage in Chitradurga
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm