ಬ್ರೇಕಿಂಗ್ ನ್ಯೂಸ್
10-06-25 06:10 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 10 : ರಾಜ್ಯ ಸರ್ಕಾರವು ಮೇಲ್ಮನೆಗೆ ನಾಮನಿರ್ದೇಶನ ಮಾಡಲು ನಾಲ್ವರ ಹೆಸರನ್ನು ಅಂತಿಮಗೊಳಿಸಿದ್ದರೂ, ತೆರೆಮರೆಯಲ್ಲಿ ಇದರಲ್ಲಿ ಬದಲಾವಣೆ ಮಾಡಲು ಕಸರತ್ತು ನಡೆದಿದೆ. ಹೀಗಾಗಿ ಈ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸದೆ ಸರ್ಕಾರ ಮತ್ತು ಕೆಪಿಸಿಸಿ ಅಂಗಳದಲ್ಲಿಯೇ ಉಳಿಸಿಕೊಂಡು ಆಕಾಂಕ್ಷಿಗಳು ಎಡತಾಕಲು ಅವಕಾಶ ನೀಡಲಾಗಿದೆ.
ಮೇಲ್ಮನೆ ಪಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿದ ಹೊರತಾಗಿಯೂ, ಮುಖ್ಯಮಂತ್ರಿ ಕಚೇರಿಯಲ್ಲಿಯೇ ಸಿಲುಕಿಕೊಂಡಿದೆ ಎಂದು ಹೇಳಲಾಗುತ್ತಿದೆ. ಕೆಲವು ಹೆಸರುಗಳ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಆಕ್ಷೇಪ ಇರುವುದರಿಂದ ಡಿಕೆಶಿ ಒಪ್ಪಿಗೆ ಸಿಕ್ಕದೆ ಪಟ್ಟಿ ಅಂತಿಮಗೊಂಡಿಲ್ಲ ಎನ್ನಲಾಗಿದೆ. ಜೆಡಿಎಸ್ ನಿಂದ ಕಾಂಗ್ರೆಸ್ ಬಂದಿದ್ದ ರಮೇಶ್ ಬಾಬು, ಮಾಜಿ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಅನಿವಾಸಿ ಭಾರತೀಯ ಘಟಕದ ಮಾಜಿ ಉಪಾಧ್ಯಕ್ಷೆ ಆರತಿ ಕೃಷ್ಣ ಮತ್ತು ದಲಿತ ಮುಖಂಡ ಡಿ.ಜಿ. ಸಾಗರ್ ಅವರ ಹೆಸರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಪಕ್ಷ ಮತ್ತು ಸರ್ಕಾರದ ಕಡೆಯಿಂದ ಅನುಮೋದನೆ ನೀಡಲಾಗಿತ್ತು.

ಜನತಾದಳ (ಜಾತ್ಯತೀತ) ಹಿನ್ನೆಲೆ ಹೊಂದಿರುವ ರಮೇಶ್ ಬಾಬು ಅವರನ್ನು ನಾಮನಿರ್ದೇಶನ ಮಾಡಲು ಪಕ್ಷದಲ್ಲಿ ಕೆಲವು ನಾಯಕರ ಆಕ್ಷೇಪಣೆ ಇದೆ ಎಂದು ಮೂಲಗಳು ಹೇಳುತ್ತಿವೆ. ಹೀಗಾಗಿ ಪಟ್ಟಿಗೆ ಬ್ರೇಕ್ ಸಿಕ್ಕಿದೆ ಎನ್ನುವ ಮಾಹಿತಿ ಇದೆ. ಬಾಬು ಈ ಹಿಂದೆ ಜೆಡಿಎಸ್ ನಾಮನಿರ್ದೇಶನದ ಮೇಲೆ ಎಂಎಲ್ಸಿ ಆಗಿದ್ದವರು. 2020 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇವರ ಹೆಸರನ್ನು ಬದಲಾಯಿಸುವ ಬಗ್ಗೆ ಕೆಲವು ನಾಯಕರು ಒತ್ತಡ ಹಾಕಿದ್ದಾರೆ. ಈ ಹೆಸರಗಳಲ್ಲಿಯೂ ಸಿದ್ದರಾಮಯ್ಯ ಬಣ, ಡಿಕೆಶಿ ಬಣ ಎಂಬ ಗುಂಪು ಇರುವುದರಿಂದ ಈ ಬಗ್ಗೆಯೂ ಪಕ್ಷದೊಳಗೆ ಚರ್ಚೆ ನಡೆದಿದೆ.
ನಾಲ್ಕು ಸ್ಥಾನಗಳಲ್ಲಿ, ಮೂರು ಎಂಎಲ್ಸಿಗಳ ಅವಧಿ ಆರು ವರ್ಷಗಳ ವರೆಗೆ ಮತ್ತು ಉಳಿದ ಒಂದು ಸ್ಥಾನ (ಸಿಪಿ ಯೋಗೇಶ್ವರ ರಾಜೀನಾಮೆ ನೀಡಿದ ನಂತರ ಖಾಲಿಯಾಗಿದೆ) ಒಂದು ವರ್ಷದ ಅವಧಿಗೆ ಖಾಲಿ ಇದೆ. ಯಾರಿಗೆ ಯಾವುದನ್ನು ನೀಡಬೇಕೆಂಬ ಬಗ್ಗೆಯೂ ಗೊಂದಲವಿದೆ. ಒಂದು ವರ್ಷದ ಅವಧಿಯ ಎಂಎಲ್ಸಿ ಸ್ಥಾನವನ್ನು ತೆಗೆದುಕೊಳ್ಳಲು ಯಾರೂ ಸಿದ್ಧರಿಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳುತ್ತಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿದ್ದು, ಅಂತಿಮಗೊಂಡ ಹೆಸರುಗಳನ್ನು ಬದಲಾಯಿಸುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು. ಕೆಲವರು ತಮ್ಮ ಹೆಸರುಗಳನ್ನು ಪರಿಗಣಿಸುವಂತೆ ಸಿಎಂ ಮತ್ತು ಡಿಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ನಾಲ್ಕು ಸ್ಥಾನ ಭರ್ತಿಯಾದರೆ, ಕಾಂಗ್ರೆಸ್ ಪರಿಷತ್ತಿನಲ್ಲಿ ಸರಳ ಬಹುಮತ ಪಡೆಯುವ ನಿರೀಕ್ಷೆಯಿದೆ.
Four Names Finalized for MLC Nominations Including Dinesh Amin Mattu, Ramesh Babu.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm