ಬ್ರೇಕಿಂಗ್ ನ್ಯೂಸ್
10-06-25 06:49 pm HK News Desk ಕರ್ನಾಟಕ
ಕಾರವಾರ, ಜೂ.10 : ಒಳ್ಳು ಒನಕೆಯ ನುಂಗಿ, ಕಲ್ಲು ಗೂಟವ ನುಂಗಿ.. ಕೋಡಗನ ಕೋಳಿ ನುಂಗಿತ್ತಾ... ಅನ್ನುವ ತತ್ವಪದವನ್ನು ನೀವೆಲ್ಲ ಕೇಳಿರುತ್ತೀರಿ. ಅದೇ ರೀತಿ ಇಲ್ಲಿ ಕೋಡಗನ ಬದಲು ಹಾವು ವಿಚಿತ್ರವಾಗಿ ವರ್ತಿಸಿ, ಈ ಪದ್ಯ ನೆನಪಿಸಿದೆ. ಯಾಕಂದ್ರೆ, ಇಲ್ಲೊಂದು ನಾಗರಹಾವು ಹರಿತ ಚಾಕುವನ್ನು ನುಂಗಿ ಒದ್ದಾಡಿ ಸುದ್ದಿಯಾಗಿದೆ.
ಇಲಿ, ಕೋಳಿ, ಮೊಟ್ಟೆ, ಕಪ್ಪೆಯನ್ನು ಹಾವುಗಳು ನುಂಗುವುದನ್ನು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ತನ್ನ ಆಹಾರ ಅನ್ಕೊಂಡು ನಾಗರ ಹಾವು ಚಾಕುವನ್ನೇ ನುಂಗಿದ್ದು ಆನಂತರ ವಿಲ ವಿಲ ಒದ್ದಾಡಿದ ಪ್ರಸಂಗ ಕುಮಟಾದಲ್ಲಿ ನಡೆದಿದೆ.


ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕರ ಅಡುಗೆ ಮನೆಯಲ್ಲಿದ್ದ ಚಾಕು ಮನೆಯ ಹೊರಗಡೆ ಬಿದ್ದಿತ್ತು. ಆದರೆ ಅಲ್ಲಿ ಹಾವು ಓಡಾಡುತ್ತಿರುವುದನ್ನು ಕಂಡ ಮನೆಯವರು ಸ್ಥಳಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲಿ ಅಲ್ಲಿದ್ದ ಚಾಕು ಕಣ್ಮರೆಯಾಗಿತ್ತು. ಹಾವು ಮಾತ್ರ ಏನೋ ತಿಂದು ಮಲಗಿರುವಂತೆ ಬಿದ್ದುಕೊಂಡಿತ್ತು. ಹಾವು ಅಲ್ಲಿಂದ ಕದಲದೇ ಇದ್ದುದರಿಂದ ಮತ್ತು ಚಾಕು ಕೂಡ ಇಲ್ಲದಿರುವುದನ್ನು ನೋಡಿ ಅನುಮಾನದಲ್ಲಿ ಉರಗ ತಜ್ಞ ಪವನ್ ನಾಯ್ಕ ಅವರನ್ನು ಕರೆಸಿದ್ದರು.
ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಹಾವು ಚಾಕು ನುಂಗಿ ಒದ್ದಾಡುತ್ತಿರುವುದು ಖಚಿತವಾಗಿದೆ. ಚಾಕುವಿನ ತುದಿ ಗಂಟಲಿನಲ್ಲಿ ಸಿಲುಕಿದ್ದು, ಅದನ್ನು ಹೊರಹಾಕಲು ಹಾವು ಒಡ್ಡಾಡುತ್ತಿರುವುದು ಕಂಡುಬಂದಿದೆ. ಚಾಕುವನ್ನು ಹೊರತೆಗೆಯದಿದ್ದರೆ ಹಾವು ಸಾಯುತ್ತದೆ ಎಂದು ಪವನ್ ಕೂಡಲೇ ಅದನ್ನು ಪಶು ಆಸ್ಪತ್ರೆಯ ಸಹಾಯಕ ಅದ್ವೈತ ಭಟ್ ಅವರ ಮನೆಗೆ ಕೊಂಡೊಯ್ದು ಅರ್ಧ ಗಂಟೆಗೂ ಆಪರೇಶನ್ ಮಾಡಿಸಿದ್ದಾರೆ. ಕೊನೆಗೆ, ಚಾಕುವನ್ನು ಹಾವಿನ ಹೊಟ್ಟೆಯಿಂದ ಹೊರ ತೆಗೆದು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Kumta Snake Swallows Knife in Bizarre Incident at Kumta, Rescued After Emergency Operation.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm